Featured

SILVER SPIRIT- 6ನೇ ಐಷಾರಾಮಿ ವೆಸೆಲ್ ಬಂದರು ನಗರಿ ಮಂಗಳೂರಿಗೆ.. Vishwanews24

SILVER SPIRIT- 6ನೇ ಐಷಾರಾಮಿ ವೆಸೆಲ್ ಬಂದರು ನಗರಿ ಮಂಗಳೂರಿಗೆ..

ಮಂಗಳೂರು,: ಪ್ರಸ್ತುತ ಋತುವಿನ ಆರನೇ ಐಷಾರಾಮಿ ವಿಹಾರ ನೌಕೆ ‘ಸಿಲ್ವರ್ ಸ್ಪಿರಿಟ್’ ಇಂದು ಕಡಲ ನಗರಿ ಮಂಗಳೂರಿಗೆ ಆಗಮಿಸಿತು. ಎನ್‌ಎಂಪಿಎ ಬಂದರಿಗೆ ಆಗಮಿಸಿದ ಐಷರಮಿ ಹಡಗನ್ನು ಬಂದರು ಪ್ರಾಧಿಕಾರ ಅಧ್ಯಕ್ಷರು ಮತ್ತು ಆಡಳಿತ ವರ್ಗ ಸ್ವಾಗತಿಸಿತು.

497 ಪ್ರಯಾಣಿಕರು ಮತ್ತು 411 ಸಿಬ್ಬಂದಿಯನ್ನು ಹೊತ್ತುಕೊಂಡು ಕೊಚ್ಚಿಯಿಂದ ಈ ಹಡಗು ಬಂದಿದ್ದು, ಹಡಗಿನ ಒಟ್ಟಾರೆ ಉದ್ದವು 210.70 ಮೀಟರ್‌ಗಳಾಗಿದ್ದು, 39,444 ಒಟ್ಟು ಟನ್‌ಗಳನ್ನು ಸಾಗಿಸುವ ಸಾಮರ್ಥ್ಯ ಮತ್ತು 6.60 ಮೀಟರ್‌ಗಳ ಡ್ರಾಫ್ಟ್ ಹೊಂದಿದೆ.

ಸಾಂಪ್ರದಾಯಿಕ ಡೋಲು (ಚೆಂಡೆ) ಬಾರಿಸುವ ಮೂಲಕ ಪ್ರಯಾಣಿಕರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು. ಕ್ರೂಸ್ ಪ್ರಯಾಣಿಕರಿಗೆ ಆಹ್ಲಾದಕರ ಅನುಭವಕ್ಕಾಗಿ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಪ್ರಯಾಣಿಕರ ವೈದ್ಯಕೀಯ ತಪಾಸಣೆ, ತ್ವರಿತ ಸಂಚಾರಕ್ಕಾಗಿ ವಲಸೆ ಮತ್ತು ಕಸ್ಟಮ್ಸ್ ಕೌಂಟರ್‌ಗಳು, ಸ್ಥಳೀಯ ಮಾರುಕಟ್ಟೆಗೆ ಭೇಟಿ ನೀಡುವ ಪ್ರಯಾಣಿಕರಿಗೆ 02 ಶಟಲ್ ಬಸ್‌ಗಳು ಸೇರಿದಂತೆ 25 ಕೋಚ್‌ಗಳು ಮತ್ತು ಮಂಗಳೂರು ನಗರದ ಸುತ್ತಮುತ್ತಲಿನ ಅಂಗಡಿಗಳು, ಟ್ಯಾಕ್ಸಿಗಳು, ಪ್ರವಾಸಿ ವ್ಯಾನ್‌ಗಳನ್ನು ವ್ಯವಸ್ಥೆ ಮಾಡಲಾಗಿತ್ತು.

ಅನೇಕ ಕ್ರೂಸ್ ಪ್ರಯಾಣಿಕರು ಬಂದರಿನಲ್ಲಿ ವ್ಯವಸ್ಥೆ ಮಾಡಲಾಗಿದ್ದ ಧ್ಯಾನ ಕೇಂದ್ರದ ಪ್ರಯೋಜನಗಳನ್ನು ಪಡೆದರು. ಪ್ರವಾಸಿಗರಿಗೆ ಬಟ್ಟೆ ಮತ್ತು ಕರಕುಶಲ ಮಳಿಗೆಗಳನ್ನು ಸಹ ತೆರೆಯಲಾಗಿತ್ತು. ವಿಶೇಷ ಆಕರ್ಷಣೆಯಾಗಿ, ಪ್ರವಾಸೋದ್ಯಮ ಸಚಿವಾಲಯದಿಂದ ಸೆಲ್ಫಿ ಸ್ಟ್ಯಾಂಡ್ ಅನ್ನು ಸ್ಥಾಪಿಸಲಾಗಿತ್ತು.

ಪ್ರಯಾಣಿಕರು ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದರು; ಅಚಲ್ ಗೋಡಂಬಿ ಕಾರ್ಖಾನೆ, ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನ, ಕದ್ರಿ ಮಜುನಾಥೇಶ್ವರ ದೇವಸ್ಥಾನ, ಸೇಂಟ್ ಅಲೋಶಿಯಸ್ ಚಾಪೆಲ್, ಸ್ಥಳೀಯ ಮಾರುಕಟ್ಟೆ, ಪಿಲಿಕುಳ ಕುಶಲಕರ್ಮಿ ಗ್ರಾಮ, ಸಾವಿರ ಕಂಬಗಳ ಬಸದಿ ಮತ್ತು ಸೋನ್ಸ್ ಫಾರಂ ಗಳನ್ನು ಸಂದರ್ಶಿಸಿದರು.

ಪ್ರವಾಸಿಗರು ತಮ್ಮ ಹಡಗಿಗೆ ಹಿಂತಿರುಗುವಾಗ ಮಂಗಳೂರು ಭೇಟಿಯ ನೆನಪಿಗಾಗಿ ಸ್ಮರಣಿಕೆಗಳನ್ನು ನೀಡಲಾಯಿತು. ಬಳಿಕ ಕರಾವಳಿಯ ಸವಿ ನೆನಪುಗಳೊಂದಿಗೆ ಹಡಗು ತನ್ನ ಮುಂದಿನ ತಾಣವಾದ ಗೋವಾಕ್ಕೆ ಪ್ರಯಾಣಿಸಿತು.

Vishwa News 24

Recent Posts

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ – vishwanews24

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…

13 hours ago

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ – vishwanews24

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…

13 hours ago

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ – vishwanews24

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…

14 hours ago

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…

14 hours ago

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ -vishwanews24

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…

14 hours ago

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ -vishwanews24

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…

14 hours ago