ಮಂಗಳೂರು,: ಪ್ರಸ್ತುತ ಋತುವಿನ ಆರನೇ ಐಷಾರಾಮಿ ವಿಹಾರ ನೌಕೆ ‘ಸಿಲ್ವರ್ ಸ್ಪಿರಿಟ್’ ಇಂದು ಕಡಲ ನಗರಿ ಮಂಗಳೂರಿಗೆ ಆಗಮಿಸಿತು. ಎನ್ಎಂಪಿಎ ಬಂದರಿಗೆ ಆಗಮಿಸಿದ ಐಷರಮಿ ಹಡಗನ್ನು ಬಂದರು ಪ್ರಾಧಿಕಾರ ಅಧ್ಯಕ್ಷರು ಮತ್ತು ಆಡಳಿತ ವರ್ಗ ಸ್ವಾಗತಿಸಿತು.
497 ಪ್ರಯಾಣಿಕರು ಮತ್ತು 411 ಸಿಬ್ಬಂದಿಯನ್ನು ಹೊತ್ತುಕೊಂಡು ಕೊಚ್ಚಿಯಿಂದ ಈ ಹಡಗು ಬಂದಿದ್ದು, ಹಡಗಿನ ಒಟ್ಟಾರೆ ಉದ್ದವು 210.70 ಮೀಟರ್ಗಳಾಗಿದ್ದು, 39,444 ಒಟ್ಟು ಟನ್ಗಳನ್ನು ಸಾಗಿಸುವ ಸಾಮರ್ಥ್ಯ ಮತ್ತು 6.60 ಮೀಟರ್ಗಳ ಡ್ರಾಫ್ಟ್ ಹೊಂದಿದೆ.
ಸಾಂಪ್ರದಾಯಿಕ ಡೋಲು (ಚೆಂಡೆ) ಬಾರಿಸುವ ಮೂಲಕ ಪ್ರಯಾಣಿಕರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು. ಕ್ರೂಸ್ ಪ್ರಯಾಣಿಕರಿಗೆ ಆಹ್ಲಾದಕರ ಅನುಭವಕ್ಕಾಗಿ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಪ್ರಯಾಣಿಕರ ವೈದ್ಯಕೀಯ ತಪಾಸಣೆ, ತ್ವರಿತ ಸಂಚಾರಕ್ಕಾಗಿ ವಲಸೆ ಮತ್ತು ಕಸ್ಟಮ್ಸ್ ಕೌಂಟರ್ಗಳು, ಸ್ಥಳೀಯ ಮಾರುಕಟ್ಟೆಗೆ ಭೇಟಿ ನೀಡುವ ಪ್ರಯಾಣಿಕರಿಗೆ 02 ಶಟಲ್ ಬಸ್ಗಳು ಸೇರಿದಂತೆ 25 ಕೋಚ್ಗಳು ಮತ್ತು ಮಂಗಳೂರು ನಗರದ ಸುತ್ತಮುತ್ತಲಿನ ಅಂಗಡಿಗಳು, ಟ್ಯಾಕ್ಸಿಗಳು, ಪ್ರವಾಸಿ ವ್ಯಾನ್ಗಳನ್ನು ವ್ಯವಸ್ಥೆ ಮಾಡಲಾಗಿತ್ತು.
ಅನೇಕ ಕ್ರೂಸ್ ಪ್ರಯಾಣಿಕರು ಬಂದರಿನಲ್ಲಿ ವ್ಯವಸ್ಥೆ ಮಾಡಲಾಗಿದ್ದ ಧ್ಯಾನ ಕೇಂದ್ರದ ಪ್ರಯೋಜನಗಳನ್ನು ಪಡೆದರು. ಪ್ರವಾಸಿಗರಿಗೆ ಬಟ್ಟೆ ಮತ್ತು ಕರಕುಶಲ ಮಳಿಗೆಗಳನ್ನು ಸಹ ತೆರೆಯಲಾಗಿತ್ತು. ವಿಶೇಷ ಆಕರ್ಷಣೆಯಾಗಿ, ಪ್ರವಾಸೋದ್ಯಮ ಸಚಿವಾಲಯದಿಂದ ಸೆಲ್ಫಿ ಸ್ಟ್ಯಾಂಡ್ ಅನ್ನು ಸ್ಥಾಪಿಸಲಾಗಿತ್ತು.
ಪ್ರಯಾಣಿಕರು ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದರು; ಅಚಲ್ ಗೋಡಂಬಿ ಕಾರ್ಖಾನೆ, ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನ, ಕದ್ರಿ ಮಜುನಾಥೇಶ್ವರ ದೇವಸ್ಥಾನ, ಸೇಂಟ್ ಅಲೋಶಿಯಸ್ ಚಾಪೆಲ್, ಸ್ಥಳೀಯ ಮಾರುಕಟ್ಟೆ, ಪಿಲಿಕುಳ ಕುಶಲಕರ್ಮಿ ಗ್ರಾಮ, ಸಾವಿರ ಕಂಬಗಳ ಬಸದಿ ಮತ್ತು ಸೋನ್ಸ್ ಫಾರಂ ಗಳನ್ನು ಸಂದರ್ಶಿಸಿದರು.
ಪ್ರವಾಸಿಗರು ತಮ್ಮ ಹಡಗಿಗೆ ಹಿಂತಿರುಗುವಾಗ ಮಂಗಳೂರು ಭೇಟಿಯ ನೆನಪಿಗಾಗಿ ಸ್ಮರಣಿಕೆಗಳನ್ನು ನೀಡಲಾಯಿತು. ಬಳಿಕ ಕರಾವಳಿಯ ಸವಿ ನೆನಪುಗಳೊಂದಿಗೆ ಹಡಗು ತನ್ನ ಮುಂದಿನ ತಾಣವಾದ ಗೋವಾಕ್ಕೆ ಪ್ರಯಾಣಿಸಿತು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…