ಮಂಗಳೂರು,: ಪ್ರಸ್ತುತ ಋತುವಿನ ಆರನೇ ಐಷಾರಾಮಿ ವಿಹಾರ ನೌಕೆ ‘ಸಿಲ್ವರ್ ಸ್ಪಿರಿಟ್’ ಇಂದು ಕಡಲ ನಗರಿ ಮಂಗಳೂರಿಗೆ ಆಗಮಿಸಿತು. ಎನ್ಎಂಪಿಎ ಬಂದರಿಗೆ ಆಗಮಿಸಿದ ಐಷರಮಿ ಹಡಗನ್ನು ಬಂದರು ಪ್ರಾಧಿಕಾರ ಅಧ್ಯಕ್ಷರು ಮತ್ತು ಆಡಳಿತ ವರ್ಗ ಸ್ವಾಗತಿಸಿತು.
497 ಪ್ರಯಾಣಿಕರು ಮತ್ತು 411 ಸಿಬ್ಬಂದಿಯನ್ನು ಹೊತ್ತುಕೊಂಡು ಕೊಚ್ಚಿಯಿಂದ ಈ ಹಡಗು ಬಂದಿದ್ದು, ಹಡಗಿನ ಒಟ್ಟಾರೆ ಉದ್ದವು 210.70 ಮೀಟರ್ಗಳಾಗಿದ್ದು, 39,444 ಒಟ್ಟು ಟನ್ಗಳನ್ನು ಸಾಗಿಸುವ ಸಾಮರ್ಥ್ಯ ಮತ್ತು 6.60 ಮೀಟರ್ಗಳ ಡ್ರಾಫ್ಟ್ ಹೊಂದಿದೆ.
ಸಾಂಪ್ರದಾಯಿಕ ಡೋಲು (ಚೆಂಡೆ) ಬಾರಿಸುವ ಮೂಲಕ ಪ್ರಯಾಣಿಕರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು. ಕ್ರೂಸ್ ಪ್ರಯಾಣಿಕರಿಗೆ ಆಹ್ಲಾದಕರ ಅನುಭವಕ್ಕಾಗಿ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಪ್ರಯಾಣಿಕರ ವೈದ್ಯಕೀಯ ತಪಾಸಣೆ, ತ್ವರಿತ ಸಂಚಾರಕ್ಕಾಗಿ ವಲಸೆ ಮತ್ತು ಕಸ್ಟಮ್ಸ್ ಕೌಂಟರ್ಗಳು, ಸ್ಥಳೀಯ ಮಾರುಕಟ್ಟೆಗೆ ಭೇಟಿ ನೀಡುವ ಪ್ರಯಾಣಿಕರಿಗೆ 02 ಶಟಲ್ ಬಸ್ಗಳು ಸೇರಿದಂತೆ 25 ಕೋಚ್ಗಳು ಮತ್ತು ಮಂಗಳೂರು ನಗರದ ಸುತ್ತಮುತ್ತಲಿನ ಅಂಗಡಿಗಳು, ಟ್ಯಾಕ್ಸಿಗಳು, ಪ್ರವಾಸಿ ವ್ಯಾನ್ಗಳನ್ನು ವ್ಯವಸ್ಥೆ ಮಾಡಲಾಗಿತ್ತು.
ಅನೇಕ ಕ್ರೂಸ್ ಪ್ರಯಾಣಿಕರು ಬಂದರಿನಲ್ಲಿ ವ್ಯವಸ್ಥೆ ಮಾಡಲಾಗಿದ್ದ ಧ್ಯಾನ ಕೇಂದ್ರದ ಪ್ರಯೋಜನಗಳನ್ನು ಪಡೆದರು. ಪ್ರವಾಸಿಗರಿಗೆ ಬಟ್ಟೆ ಮತ್ತು ಕರಕುಶಲ ಮಳಿಗೆಗಳನ್ನು ಸಹ ತೆರೆಯಲಾಗಿತ್ತು. ವಿಶೇಷ ಆಕರ್ಷಣೆಯಾಗಿ, ಪ್ರವಾಸೋದ್ಯಮ ಸಚಿವಾಲಯದಿಂದ ಸೆಲ್ಫಿ ಸ್ಟ್ಯಾಂಡ್ ಅನ್ನು ಸ್ಥಾಪಿಸಲಾಗಿತ್ತು.
ಪ್ರಯಾಣಿಕರು ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದರು; ಅಚಲ್ ಗೋಡಂಬಿ ಕಾರ್ಖಾನೆ, ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನ, ಕದ್ರಿ ಮಜುನಾಥೇಶ್ವರ ದೇವಸ್ಥಾನ, ಸೇಂಟ್ ಅಲೋಶಿಯಸ್ ಚಾಪೆಲ್, ಸ್ಥಳೀಯ ಮಾರುಕಟ್ಟೆ, ಪಿಲಿಕುಳ ಕುಶಲಕರ್ಮಿ ಗ್ರಾಮ, ಸಾವಿರ ಕಂಬಗಳ ಬಸದಿ ಮತ್ತು ಸೋನ್ಸ್ ಫಾರಂ ಗಳನ್ನು ಸಂದರ್ಶಿಸಿದರು.
ಪ್ರವಾಸಿಗರು ತಮ್ಮ ಹಡಗಿಗೆ ಹಿಂತಿರುಗುವಾಗ ಮಂಗಳೂರು ಭೇಟಿಯ ನೆನಪಿಗಾಗಿ ಸ್ಮರಣಿಕೆಗಳನ್ನು ನೀಡಲಾಯಿತು. ಬಳಿಕ ಕರಾವಳಿಯ ಸವಿ ನೆನಪುಗಳೊಂದಿಗೆ ಹಡಗು ತನ್ನ ಮುಂದಿನ ತಾಣವಾದ ಗೋವಾಕ್ಕೆ ಪ್ರಯಾಣಿಸಿತು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…