ಉಡುಪಿ: ಮನೆಗೊಂದರಂತೆ ಗಿಡ ನೆಡುವ ಅಭಿಯಾನವನ್ನು ನಾವೆಲ್ಲಾ ಒಟ್ಟಾಗಿ ಮಾಡಬೇಕಾಗಿದೆ. ಮುಂದಿನ ಪೀಳಿಗೆಯ ಬಾಳನ್ನು ಹಸನು ಮಾಡಲು ಪರಿಸರ ಸ್ವಚ್ಛ ಇಡುವ ಮೂಲಕ ಕಾರ್ಯಕ್ರಮ ರೂಪಿಸಬೇಕು ಎಂದು ನಗರಸಭಾ ಸದಸ್ಯ ವಿಜಯ ಕೆ. ಕೊಡವೂರು ಅಭಿಪ್ರಾಯ ಪಟ್ಟರು.
ಅವರು ಇಂದು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಎಸ್ ಕೆ ಪಿ ಎ ಉಡುಪಿ ವಲಯದ ವತಿಯಿಂದ ಕೊಡವೂರಿನ ಕೆರೆಕಟ್ಟೆ ಗಣಪತಿ ಗುಡಿಯ ವಠಾರವನ್ನು ಸ್ವಚ್ಚ ಗೊಳಿಸಿ ವನಮಹೋತ್ಸವ ವನ್ನು ನೆರವೇರಿಸಿ ಸುಮಾರು 75 ಗಿಡಗಳನ್ನು ನೆಟ್ಟು ಮಾತನಾಡಿದರು.
ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಉಡುಪಿ ವಲಯದ ವತಿಯಿಂದ ಕೊಡವೂರಿನ ಗಣಪತಿ ಕೆರೆಕಟ್ಟೆ ದೇವಾಸ್ಥಾನದ ವಠಾರವನ್ನು ಸ್ವಚ್ಚ ಗೊಲಿಸಲಾಯಿತು ಮತ್ತು ಸುಮಾರು 75 ಗಿಡಗಳನ್ನು ನೆಡಲಾಯಿತು ಹಾಗೂ ಆಗಮಿಸಿದ ಎಲ್ಲಾ ಸದಸ್ಯರಿಗೂ ಗಿಡವನ್ನು ನೀಡಿ ವನಮಹೋತ್ಸವವನ್ನು ಆಚರಿಸಲಾಯಿತು
ಈ ಸಂದರ್ಭದಲ್ಲಿ ಶ್ರೀ ಶಂಕರನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾ ಪ್ರಕಾಶ್ ಜಿ., ಜಿಲ್ಲಾಧ್ಯಕ್ಷ ಕರಂಡಾಡಿ ಶ್ರೀಧರ್ ಶೆಟ್ಟಿಗಾರ್, ಗೌರವಾಧ್ಯಕ್ಷ ಶಿವ ಕೆ.ಅಮೀನ್, ಉಪಾಧ್ಯಕ್ಷ ನವೀನ್ ಬಳ್ಳಾಲ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸುಂದರ್ ಪೂಜಾರಿ ಕೊಳಲಗಿರಿ ಉಪಸ್ಥಿತರಿದ್ದರು.
ವಲಯಾಧ್ಯಕ್ಷ ಪ್ರಕಾಶ್ ಎಸ್. ಕೊಡಂಕೂರು ಸ್ವಾಗತಿಸಿದರು. ಜಿಲ್ಲಾ ಮಾಧ್ಯಮ ಪ್ರತಿನಿಧಿ ಜನಾರ್ದನ್ ಕೊಡವೂರು ನಿರೂಪಿಸಿದರು. ಕಾರ್ಯದರ್ಶಿ ಸುಕೇಶ್.ಕೆ ಅಮೀನ್ ವಂದಿಸಿದರು.
ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…
ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…
ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…
ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…
ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…
ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…