SKPA ಉಡುಪಿ ವಲಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ / vishwanews24

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ

ಉಡುಪಿ: ಮನೆಗೊಂದರಂತೆ ಗಿಡ ನೆಡುವ ಅಭಿಯಾನವನ್ನು ನಾವೆಲ್ಲಾ ಒಟ್ಟಾಗಿ ಮಾಡಬೇಕಾಗಿದೆ. ಮುಂದಿನ ಪೀಳಿಗೆಯ ಬಾಳನ್ನು ಹಸನು ಮಾಡಲು ಪರಿಸರ ಸ್ವಚ್ಛ ಇಡುವ ಮೂಲಕ ಕಾರ್ಯಕ್ರಮ ರೂಪಿಸಬೇಕು ಎಂದು ನಗರಸಭಾ ಸದಸ್ಯ ವಿಜಯ ಕೆ. ಕೊಡವೂರು ಅಭಿಪ್ರಾಯ ಪಟ್ಟರು.

ಅವರು ಇಂದು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಎಸ್ ಕೆ ಪಿ ಎ ಉಡುಪಿ ವಲಯದ ವತಿಯಿಂದ ಕೊಡವೂರಿನ ಕೆರೆಕಟ್ಟೆ ಗಣಪತಿ ಗುಡಿಯ ವಠಾರವನ್ನು ಸ್ವಚ್ಚ ಗೊಳಿಸಿ ವನಮಹೋತ್ಸವ ವನ್ನು ನೆರವೇರಿಸಿ ಸುಮಾರು 75 ಗಿಡಗಳನ್ನು ನೆಟ್ಟು ಮಾತನಾಡಿದರು.

ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಉಡುಪಿ ವಲಯದ ವತಿಯಿಂದ ಕೊಡವೂರಿನ ಗಣಪತಿ ಕೆರೆಕಟ್ಟೆ ದೇವಾಸ್ಥಾನದ ವಠಾರವನ್ನು ಸ್ವಚ್ಚ ಗೊಲಿಸಲಾಯಿತು ಮತ್ತು ಸುಮಾರು 75 ಗಿಡಗಳನ್ನು ನೆಡಲಾಯಿತು ಹಾಗೂ ಆಗಮಿಸಿದ ಎಲ್ಲಾ ಸದಸ್ಯರಿಗೂ ಗಿಡವನ್ನು ನೀಡಿ ವನಮಹೋತ್ಸವವನ್ನು ಆಚರಿಸಲಾಯಿತು

ಈ ಸಂದರ್ಭದಲ್ಲಿ ಶ್ರೀ ಶಂಕರನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾ ಪ್ರಕಾಶ್ ಜಿ., ಜಿಲ್ಲಾಧ್ಯಕ್ಷ ಕರಂಡಾಡಿ ಶ್ರೀಧರ್ ಶೆಟ್ಟಿಗಾರ್, ಗೌರವಾಧ್ಯಕ್ಷ ಶಿವ ಕೆ.ಅಮೀನ್, ಉಪಾಧ್ಯಕ್ಷ ನವೀನ್ ಬಳ್ಳಾಲ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸುಂದರ್ ಪೂಜಾರಿ ಕೊಳಲಗಿರಿ ಉಪಸ್ಥಿತರಿದ್ದರು.

ವಲಯಾಧ್ಯಕ್ಷ ಪ್ರಕಾಶ್ ಎಸ್. ಕೊಡಂಕೂರು ಸ್ವಾಗತಿಸಿದರು. ಜಿಲ್ಲಾ ಮಾಧ್ಯಮ ಪ್ರತಿನಿಧಿ ಜನಾರ್ದನ್ ಕೊಡವೂರು ನಿರೂಪಿಸಿದರು. ಕಾರ್ಯದರ್ಶಿ ಸುಕೇಶ್.ಕೆ ಅಮೀನ್ ವಂದಿಸಿದರು.

Vishwa News 24

Recent Posts

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

2 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

2 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

3 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

3 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

3 hours ago

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago