Featured

SSLCಯಲ್ಲಿ‌ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಬಂದ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ,ಕ್ರಮ ಕೈಗೊಳ್ಳಲು ಸಿಎಂ ಸೂಚನೆ – vishwanews24

SSLCಯಲ್ಲಿ‌ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಬಂದ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ,ಕ್ರಮ ಕೈಗೊಳ್ಳಲು ಸಿಎಂ ಸೂಚನೆ

ಬೆಂಗಳೂರು : ಎಸೆಸೆಲ್ಸಿಯಲ್ಲಿ‌ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡಬೇಕು, ನೋಟಿಸ್‌ಗೆ ಕೊಟ್ಟ ಉತ್ತರ ಸಮರ್ಪಕ‌ ಅನ್ನಿಸದಿದ್ದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದರು.

ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆಗಿನ ಎರಡನೇ ದಿನ ಸಭೆಯಲ್ಲಿ ಅವರು ಮಾತನಾಡಿದರು.

ಆರಂಭದಲ್ಲಿ ಶಾಲಾ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ, ಎಸೆಸೆಲ್ಸಿಯಲ್ಲಿ ಫಲಿತಾಂಶ ಕಡಿಮೆ ಬರುವುದಕ್ಕೆ ಶಿಕ್ಷಕರ ಕೊರತೆ, ಸಿಬ್ಬಂದಿ ಕೊರತೆ ಎನ್ನುವ ನೆಪ ಹೇಳಬೇಡಿ. ದಕ್ಷಿಣ ಕನ್ನಡ ಮತ್ತು ಇತರೆ ಜಿಲ್ಲೆಗಳಲ್ಲಿ ಮಾತ್ರ ಉತ್ತಮ ಫಲಿತಾಂಶ ಬರುತ್ತಿದೆ. ಡಿಡಿಪಿಐಗಳು ಜವಾಬ್ದಾರಿ ತೆಗೆದುಕೊಳ್ಳಬೇಕು. ಡಿಸಿಪಿಐಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಶಿಕ್ಷಕರು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದಾರೆಯೇ ಅಥವಾ ಇಲ್ಲವೇ ಎನ್ನುವುದನ್ನು ಪರಿಶೀಲನೆ ನಡೆಸಬೇಕು. ಶಿಕ್ಷಕರು ಮತ್ತು ಡಿಡಿಪಿಐಗಳು ಆಸಕ್ತಿಯಿಂದ ಕೆಲಸ ಮಾಡಿದರೆ, ಉತ್ತಮ ಫಲಿತಾಂಶ ಎಲ್ಲಾ ಕಡೆ ಬರುತ್ತದೆ ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಕಡಿಮೆ ಆಗದಂತೆ ಶಿಕ್ಷಕರು ಮತ್ತು ಅಧಿಕಾರಿಗಳು ಪೋಷಕರ ಜೊತೆ ಮಾತನಾಡಬೇಕು, ಡ್ರಾಪ್‌ಔಟ್‌ ತಡೆಯಲು ಏನೆಲ್ಲಾ ಸಾಧ್ಯವೋ ಎಲ್ಲವನ್ನೂ ಮಾಡಬೇಕು. ಡಿಡಿಪಿಐ ಗಳು, ಬಿಇಒ ಗಳು ಶಾಲೆಗಳಿಗೆ ಭೇಟಿ ನೀಡ್ತಾ ಇದಾರಾ ಎನ್ನುವ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಗಮನಿಸಬೇಕು. ಪ್ರತೀ ವರ್ಷ ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಕಡಿಮೆ ಆಗುತ್ತಿರುವುದು ಕೆಟ್ಟ ಬೆಳವಣಿಗೆ. ಸರ್ಕಾರ ಮೊಟ್ಟೆ, ಹಾಲು, ರಾಗಿಮಾಲ್ಟ್‌, ಸೂಪು, ಹಾಸ್ಟೆಲ್‌ ಸವಲತ್ತು ಎಲ್ಲಾ ಕೊಟ್ಟು ಮಕ್ಕಳ ದಾಖಲಾತಿ ಪ್ರಮಾಣ ಏಕೆ ಕಡಿಮೆ ಆಗುತ್ತಿದೆ. ನಿಮ್ಮ ಪ್ರಾಯೋಗಿಕ ಅನುಭವಗಳು ಏನು ಎಂದು ಅಧಿಕಾರಿಗಳಿಂದ ಮಾಹಿತಿ ಪಡೆದು ಸಮಸ್ಯೆಗಳನ್ನು ಬಗೆಹರಿಸಲು ಅಗತ್ಯ ಕ್ರಮಕ್ಕೆ ಸಿಎಂ ಸೂಚಿಸಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

13 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

13 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

14 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

14 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

15 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

15 hours ago