Featured

SSLC ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಸಿಎಂ ಗರಂ : ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ ಎಂದ ಶಿಕ್ಷಣ ಸಚಿವ – Vishwanews24

SSLC ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಸಿಎಂ ಗರಂ : ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ ಎಂದ ಶಿಕ್ಷಣ ಸಚಿವ

ಬೆಂಗಳೂರು: ಎಸ್‍ಎಸ್‍ಎಲ್‍ಸಿಯಲ್ಲಿ ಶಿಕ್ಷಣ ಇಲಾಖೆ  ಈ ವರ್ಷ ನೀಡಿದ 20% ಗ್ರೇಸ್ ಅಂಕಗಳಿಗೆ ಖುದ್ದು ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ವರ್ಷದಿಂದ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನಿಡಲಾಗುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿಧಾನಸೌಧದಲ್ಲಿಂದು ಇಲಾಖಾವಾರು ಪ್ರಗತಿ ಪರಿಶೀಲನೆ ಸಭೆ ನಡೆದ ವೇಳೆ ಗ್ರೇಸ್ ಅಂಕ ಕೊಟ್ಟ ವಿಚಾರ ಚರ್ಚೆಗೆ ಬಂತು. ಈ ವೇಳೆ ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಗರಂ ಆದ ಸಿಎಂ, ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಶಿಕ್ಷಣ ತಜ್ಞರು ಸೇರಿ ಹಲವರಿಂದ ವಿರೋಧ ಬಂದಿದೆ. ಗ್ರೇಸ್ ಮಾರ್ಕ್ಸ್ ಕೊಡೋದು ಅವೈಜ್ಞಾನಿಕ ಎಂಬ ಬಗ್ಗೆ ಅಭಿಪ್ರಾಯಗಳು ಬರುತ್ತಿವೆ.

ಎಸ್‍ಎಸ್‍ಎಲ್‍ಸಿಯಲ್ಲಿ (SSLC) ಗ್ರೇಸ್ ಮಾರ್ಕ್ಸ್ ಕೊಡೋದು ಅಗತ್ಯ ಇತ್ತಾ? ಪರೀಕ್ಷೆಯಲ್ಲಿ ಈ ಬಾರಿ ಕಠಿಣ ಕ್ರಮ ಕೈಗೊಂಡಿದ್ದು ಸರಿ. ಆದರೆ ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದು ಸರಿ ಇತ್ತಾ ಎಂದು ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಿಎಂ ಪ್ರಶ್ನೆ ಮಾಡಿದ್ದಾರೆ. ಅಲ್ಲದೇ ಮುಂಬರುವ ಶೈಕ್ಷಣಿಕ ವರ್ಷದಿಂದ ಗ್ರೇಸ್ ಮಾರ್ಕ್ಸ್ ಕೊಡುವ ಬಗ್ಗೆ ಮರುಪರಿಶೀಲನೆ ಮಾಡುವಂತೆ ಸಿಎಂ ಸೂಚನೆ ನೀಡಿದ್ದಾರೆ.

ಸಭೆ ಬಳಿಕ ಮಾತಾಡಿದ ಮಧು ಬಂಗಾರಪ್ಪ, ಈ ವರ್ಷ ಕೊಟ್ಟಿರುವ ಗ್ರೇಸ್ ಮಾರ್ಕ್ಸ್ ನಲ್ಲಿ ಯಾವುದೂ ಬದಲಾವಣೆ ಇಲ್ಲ. ಮುಂದಿನ ವರ್ಷದಿಂದ 20% ಗ್ರೇಸ್ ಮಾರ್ಕ್ಸ್ ಕೊಡುವ ಪದ್ಧತಿ ಇರಲ್ಲ. ಇನ್ನು ಮುಂದೆ ಹಿಂದಿನ ಪದ್ಧತಿಯೇ ಮುಂದುವರಿಯಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಪರೀಕ್ಷಾ ನಡವಳಿಕೆ ಸರಿ ಮಾಡಲು ಮುಂದಾಗಿದ್ದೆವು. ಈ ವರ್ಷ ಮಾತ್ರ ಗ್ರೇಸ್ ಮಾರ್ಕ್ಸ್ ಕೊಡುವ ತೀರ್ಮಾನ ಮಾಡಲಾಗಿತ್ತು. ಯಾವಾಗಲೂ 5% ಗ್ರೇಸ್ ಅಂಕ ಇರ್ತಿತ್ತು. ಕೋವಿಡ್ ವೇಳೆ 10% ಮಾಡಲಾಗಿತ್ತು. ಇದೀಗ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿ ಪಾಸಾಗುವಂತೆ ಮಾಡಲು 20% ಗ್ರೇಸ್ ಮಾರ್ಕ್ಸ್ ನೀಡಲಾಗಿತ್ತು. ಇದು ಈ ವರ್ಷಕ್ಕೆ ಯಾವ ಸಮಸ್ಯೆ ಇಲ್ಲ. ಮುಂದಿನ ವರ್ಷದಿಂದ ಇದು ಇರಲ್ಲ ಅಂತ ಮಧು ಬಂಗಾರಪ್ಪ  ತಿಳಿಸಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

19 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

19 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago