Featured

SSLC ಪರೀಕ್ಷೆಗೆ ಹೊಸ ಗೈಡ್​ಲೈನ್ಸ್ ಬಿಡುಗಡೆ : ವಿದ್ಯಾರ್ಥಿ, ಶಿಕ್ಷಕರಿಗೆ ಖಡಕ್ ಸೂಚನೆ – vishwanews24

SSLC ಪರೀಕ್ಷೆಗೆ ಹೊಸ ಗೈಡ್​ಲೈನ್ಸ್ ಬಿಡುಗಡೆ : ವಿದ್ಯಾರ್ಥಿ, ಶಿಕ್ಷಕರಿಗೆ ಖಡಕ್ ಸೂಚನೆ

ಬೆಂಗಳೂರು : ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಬೆನ್ನಲ್ಲೇ ರಾಜ್ಯ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಮುಖ್ಯ ಪರೀಕ್ಷೆಗೆ ಹೊಸ ಗೈಡ್​ಲೈನ್ಸ್ ಬಿಡುಗಡೆ ಮಾಡಿದೆ.

ಎಸ್ಎಸ್ಎಲ್​ಸಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಮೊಬೈಲ್ ನಿರ್ಬಂಧಿಸಲಾಗಿದೆ. ಇದೀಗ ಶಿಕ್ಷಕರು ಸಹ ಪರೀಕ್ಷೆ ವೇಳೆ ಮೊಬೈಲ್ ಬಳಸುವಂತಿಲ್ಲ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಅಲ್ಲದೇ 2 ಹಾಗೂ 3ನೇ ಪರೀಕ್ಷೆ ಆಯುಕ್ತರ ನೇತೃತ್ವದಲ್ಲಿ ನಡೆಯಲಿವೆ.

ಈ ಹಿಂದಿನ ಪರೀಕ್ಷೆಗಳನ್ನು ಕರ್ನಾಟಕ ಪರೀಕ್ಷಾ ಮಂಡಳಿ ಮೌಲ್ಯ ನಿರ್ಣಯ ಮಂಡಳಿ ನೇತೃತ್ವದಲ್ಲಿ ನಡೆಸಲಾಗಿತ್ತು. ಆದರೆ ಇದೀಗ ಹೊಸ ಗೈಡ್​​ಲೈನ್ಸ್​ ಪ್ರಕಾರ 2 ಹಾಗೂ 3ನೇ ಪರೀಕ್ಷೆ ಆಯುಕ್ತರ ನೇತೃತ್ವದಲ್ಲಿ ನಡೆಯಲಿದ್ದು, ಡಿಡಿಪಿಐ ಹಾಗೂ ಬಿಇಒಗಳಿಗೆ ಪರೀಕ್ಷೆಯ ಜವಾಬ್ದಾರಿ ನೀಡಲಾಗಿದೆ.

ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಮೊಬೈಲ್​ ತರುವಂತಿಲ್ಲ. ಜೊತೆಗೆ ಶಿಕ್ಷಕರು ಸಹ ಪರೀಕ್ಷೆ ವೇಳೆ ಮೊಬೈಲ್ ಬಳಸುವಂತಿಲ್ಲ. ಇನ್ನು ಪ್ರಶ್ನೆಪತ್ರಿಕೆ ಸೋರಿಕೆ, ಅವ್ಯಹಾರ ನಡೆಸದಂತೆ ಖಡಕ್ ಸೂಚನೆ ನೀಡಲಾಗಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದವರ ವಿರುದ್ಧ ಆಯಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬೇಕು.

ಪ್ರಶ್ನೆಪತ್ರಿಕೆ ಮುಖ್ಯೋಪಾಧ್ಯಾಯರೇ ಡೌನ್​ಲೋಡ್ ಮಾಡಬೇಕು. ಜೊತೆಗೆ ಪ್ರಶ್ನೆಪತ್ರಿಕೆ ಗೌಪ್ಯತೆ ಕಾಪಾಡಬೇಕು ಹಾಗೇ ಪ್ರಾಂಶುಪಾಲರು ಸಹ ಪರೀಕ್ಷಾ ಕೇಂದ್ರಗಳಿಗೆ ಭೇಟಿ ಪರಿಶೀಲನೆ ಮಾಡಬೇಕು ಎಂದು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದ ಹೊಸ ಮಾರ್ಗಸೂಚಿಯಲ್ಲಿ ಖಡಕ್ ಆಗಿ ತಿಳಿಸಲಾಗಿದೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

11 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

12 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

12 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

13 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

13 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

13 hours ago