ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಮೇ ಮೂರನೇ ವಾರ ಪ್ರಕಟ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.
ಈ ಕುರಿತು ನಗರದ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಮೌಲ್ಯಮಾಪನ ಪ್ರಕ್ರಿಯೆ ಮುಕ್ತಾಯವಾಗಿದೆ. ಫಲಿತಾಂಶದ ತಯಾರಿ ಮಾಡಲಾಗುತ್ತಿದೆ. ಮೂರನೇ ವಾರ ಫಲಿತಾಂಶ ಪ್ರಕಟ ಮಾಡುತ್ತೇವೆ. ಶೀಘ್ರವೇ ದಿನಾಂಕ ಪ್ರಕಟ ಮಾಡುತ್ತೇವೆ ಎಂದು ತಿಳಿಸಿದರು.
ಮೇ 16 ರಿಂದಲೇ ಶಾಲೆಗಳು ಪ್ರಾರಂಭವಾಗಲಿವೆ. ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ ಅಂತ ತಿಳಿಸಿದರು. ಎಂಎಲ್ಸಿಗಳು, ಸಭಾಪತಿಗಳು, ಎಂಎಲ್ಎಗಳು ಪತ್ರ ಬರೆದು ಹೆಚ್ಚು ಬಿಸಿಲು ಇರುತ್ತೆ ಶಾಲೆ ಪ್ರಾರಂಭ ಮುಂದಕ್ಕೆ ಹಾಕಿ ಅಂತ ಮನವಿ ಮಾಡಿದ್ದಾರೆ. ಆದರೆ ನಾವು ಹವಾಮಾನ ಇಲಾಖೆ ವರದಿ ಪಡೆದಿದ್ದೇವೆ. ಪ್ರತಿ ವರ್ಷದಂತೆ ಈ ವರ್ಷವೂ ಅದೇ ಪ್ರಮಾಣದಲ್ಲಿ ಬಿಸಿಲು ಇರಲಿದೆ. ಹೀಗಾಗಿ ಯಾವುದೇ ತೊಂದರೆ ಆಗುವುದಿಲ್ಲ ಎಂದು ಹೇಳಿದರು.
ಎರಡು ವರ್ಷ ಕೊರೊನಾದಿಂದ ಮಕ್ಕಳಿಗೆ ಸರಿಯಾಗಿ ಶಿಕ್ಷಣ ಸಿಕ್ಕಿಲ್ಲ. ಹೀಗಾಗಿ ಕಲಿಕಾ ಚೇತರಿಕೆ ಕಾರ್ಯಕ್ರಮ ಅನುಷ್ಠಾನ ಮಾಡ್ತಿದ್ದೇವೆ. ಮೇ 16 ರಿಂದಲೇ ಶಾಲೆಗಳು ಪ್ರಾರಂಭ ಆಗಲಿದ್ದು, ಮುಖ್ಯಮಂತ್ರಿಗಳು ತುಮಕೂರಿನಲ್ಲಿ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಇದೇ ಮೇ 16 ಕ್ಕೆ ಉದ್ಘಾಟನೆ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…