Featured

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ

ಬೆಂಗಳೂರು: ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ  625ರ ಬದಲಿಗೆ 525 ಅಂಕಗಳಿಗೆ ನಡೆಸಲು ಕರ್ನಾಟಕ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.

ಮಾಧ್ಯಮಗಳ ಜೊತೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ. ವಿದ್ಯಾರ್ಥಿಗಳು ತೃತೀಯ ಭಾಷೆ ಪರೀಕ್ಷೆ ಬರೆಯುತ್ತಾರೆ. ಆದರೆ ಆ ಭಾಷೆಯ 100 ಅಂಕ ಪರಿಗಣೆ ಮಾಡುವುದಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ:

ತೃತೀಯ ಭಾಷೆಗೆ ಗ್ರೇಡ್ ನೀಡುತ್ತೇವೆ ಮತ್ತು ಇದರಲ್ಲಿ ಪಾಸ್, ಫೇಲ್ ಇರುವುದಿಲ್ಲ. ಹಿಂದಿ ಭಾಷೆ ಕಡ್ಡಾಯವಲ್ಲ. ಈ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯನವರು ಒಪ್ಪಿದ್ದಾರೆ ಎಂದು ಹೇಳಿದರು.

ತೃತೀಯ ಭಾಷೆಗೆ ಎಬಿಸಿಡಿ ಎಂದು ಗ್ರೇಡ್‌ ನೀಡುತ್ತೇವೆ. ಈ ವರ್ಷದ ಪರೀಕ್ಷೆಯಲ್ಲಿ ಈ ನಿಯಮವನ್ನು ಜಾರಿ ಮಾಡಲಾಗುವುದು. ಇಂದು ಸಂಜೆ ಒಳಗಡೆ ಆದೇಶ ಜಾರಿಯಾಗಲಿದೆ ಎಂದರು.

ಈ ವೇಳೆ ಉರ್ದು ಮಾಧ್ಯಮ ಶಾಲೆಗಳಲ್ಲಿ ಕನ್ನಡವನ್ನು ತೃತೀಯ ಭಾಷೆಯನ್ನಾಗಿ ಓದಿಸಲಾಗುತ್ತದೆ. ಇಲ್ಲಿ ಕನ್ನಡ ಇರುವುದಿಲ್ಲವೇ ಎಂಬ ಪ್ರಶ್ನೆಗೆ, ಇದಕ್ಕೆ ಒಂದು ನಿಯಮವನ್ನು ನಾವು ಮಾಡುತ್ತೇವೆ. ಕನ್ನಡ ವಿಷಯಕ್ಕೆ ಧಕ್ಕೆ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ:

Vishwa News 24

Recent Posts

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

6 minutes ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

15 minutes ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

25 minutes ago

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ – vishwanews24

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…

34 minutes ago

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ – vishwanews24

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…

4 hours ago

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ – vishwanews24

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…

4 hours ago