ಬೆಂಗಳೂರು: ಇನ್ನು ಮುಂದೆ ಎಸ್ಎಸ್ಎಲ್ಸಿ ಪರೀಕ್ಷೆ 625ರ ಬದಲಿಗೆ 525 ಅಂಕಗಳಿಗೆ ನಡೆಸಲು ಕರ್ನಾಟಕ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.
ಮಾಧ್ಯಮಗಳ ಜೊತೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ. ವಿದ್ಯಾರ್ಥಿಗಳು ತೃತೀಯ ಭಾಷೆ ಪರೀಕ್ಷೆ ಬರೆಯುತ್ತಾರೆ. ಆದರೆ ಆ ಭಾಷೆಯ 100 ಅಂಕ ಪರಿಗಣೆ ಮಾಡುವುದಿಲ್ಲ ಎಂದು ತಿಳಿಸಿದರು.
ಇದನ್ನೂ ಓದಿ:
ತೃತೀಯ ಭಾಷೆಗೆ ಗ್ರೇಡ್ ನೀಡುತ್ತೇವೆ ಮತ್ತು ಇದರಲ್ಲಿ ಪಾಸ್, ಫೇಲ್ ಇರುವುದಿಲ್ಲ. ಹಿಂದಿ ಭಾಷೆ ಕಡ್ಡಾಯವಲ್ಲ. ಈ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯನವರು ಒಪ್ಪಿದ್ದಾರೆ ಎಂದು ಹೇಳಿದರು.
ತೃತೀಯ ಭಾಷೆಗೆ ಎಬಿಸಿಡಿ ಎಂದು ಗ್ರೇಡ್ ನೀಡುತ್ತೇವೆ. ಈ ವರ್ಷದ ಪರೀಕ್ಷೆಯಲ್ಲಿ ಈ ನಿಯಮವನ್ನು ಜಾರಿ ಮಾಡಲಾಗುವುದು. ಇಂದು ಸಂಜೆ ಒಳಗಡೆ ಆದೇಶ ಜಾರಿಯಾಗಲಿದೆ ಎಂದರು.
ಈ ವೇಳೆ ಉರ್ದು ಮಾಧ್ಯಮ ಶಾಲೆಗಳಲ್ಲಿ ಕನ್ನಡವನ್ನು ತೃತೀಯ ಭಾಷೆಯನ್ನಾಗಿ ಓದಿಸಲಾಗುತ್ತದೆ. ಇಲ್ಲಿ ಕನ್ನಡ ಇರುವುದಿಲ್ಲವೇ ಎಂಬ ಪ್ರಶ್ನೆಗೆ, ಇದಕ್ಕೆ ಒಂದು ನಿಯಮವನ್ನು ನಾವು ಮಾಡುತ್ತೇವೆ. ಕನ್ನಡ ವಿಷಯಕ್ಕೆ ಧಕ್ಕೆ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ಇದನ್ನೂ ಓದಿ:
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…