ಬೆಂಗಳೂರು: ಇನ್ನು ಮುಂದೆ ಎಸ್ಎಸ್ಎಲ್ಸಿ ಪರೀಕ್ಷೆ 625ರ ಬದಲಿಗೆ 525 ಅಂಕಗಳಿಗೆ ನಡೆಸಲು ಕರ್ನಾಟಕ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.
ಮಾಧ್ಯಮಗಳ ಜೊತೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ. ವಿದ್ಯಾರ್ಥಿಗಳು ತೃತೀಯ ಭಾಷೆ ಪರೀಕ್ಷೆ ಬರೆಯುತ್ತಾರೆ. ಆದರೆ ಆ ಭಾಷೆಯ 100 ಅಂಕ ಪರಿಗಣೆ ಮಾಡುವುದಿಲ್ಲ ಎಂದು ತಿಳಿಸಿದರು.
ಇದನ್ನೂ ಓದಿ:
ತೃತೀಯ ಭಾಷೆಗೆ ಗ್ರೇಡ್ ನೀಡುತ್ತೇವೆ ಮತ್ತು ಇದರಲ್ಲಿ ಪಾಸ್, ಫೇಲ್ ಇರುವುದಿಲ್ಲ. ಹಿಂದಿ ಭಾಷೆ ಕಡ್ಡಾಯವಲ್ಲ. ಈ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯನವರು ಒಪ್ಪಿದ್ದಾರೆ ಎಂದು ಹೇಳಿದರು.
ತೃತೀಯ ಭಾಷೆಗೆ ಎಬಿಸಿಡಿ ಎಂದು ಗ್ರೇಡ್ ನೀಡುತ್ತೇವೆ. ಈ ವರ್ಷದ ಪರೀಕ್ಷೆಯಲ್ಲಿ ಈ ನಿಯಮವನ್ನು ಜಾರಿ ಮಾಡಲಾಗುವುದು. ಇಂದು ಸಂಜೆ ಒಳಗಡೆ ಆದೇಶ ಜಾರಿಯಾಗಲಿದೆ ಎಂದರು.
ಈ ವೇಳೆ ಉರ್ದು ಮಾಧ್ಯಮ ಶಾಲೆಗಳಲ್ಲಿ ಕನ್ನಡವನ್ನು ತೃತೀಯ ಭಾಷೆಯನ್ನಾಗಿ ಓದಿಸಲಾಗುತ್ತದೆ. ಇಲ್ಲಿ ಕನ್ನಡ ಇರುವುದಿಲ್ಲವೇ ಎಂಬ ಪ್ರಶ್ನೆಗೆ, ಇದಕ್ಕೆ ಒಂದು ನಿಯಮವನ್ನು ನಾವು ಮಾಡುತ್ತೇವೆ. ಕನ್ನಡ ವಿಷಯಕ್ಕೆ ಧಕ್ಕೆ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ಇದನ್ನೂ ಓದಿ:
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]
ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…
ಕೋಳಿ ಫಾರ್ಮ್ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…
ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…