ಬೆಂಗಳೂರು: ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಹತ್ತನೇ ತರಗತಿ ಫಲಿತಾಂಶ ಸೋಮವಾರ ಮಧ್ಯಾಹ್ನ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಪ್ರಕಟಿಸಿದರು.
ಈ ಬಾರಿ ಒಟ್ಟು 582316 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಒಟ್ಟು 71.80% ಫಲಿತಾಂಶ ದಾಖಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ ಸ್ಥಾನಿಯಾಗಿದ್ದು, ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. ಬೆಂಗಳೂರು ಗ್ರಾಮಾಂತರ ಎರಡನೇ, ಮಧುಗಿರಿ ಮೂರನೇ, ಮಂಡ್ಯ ನಾಲ್ಕು ಮತ್ತು ಚಿತ್ರದುರ್ಗ ಜಿಲ್ಲೆ ಐದನೇ ಸ್ಥಾನ ಪಡೆದುಕೊಂಡಿವೆ. ಉಡುಪಿ ಜಿಲ್ಲೆ ಈ ಬಾರಿ 7 ನೇ ಸ್ಥಾನ ಪಡೆದರೆ ದಕ್ಷಿಣಕನ್ನಡ ಜಿಲ್ಲೆ 12 ನೇ ಸ್ಥಾನ ಪಡೆದಿದೆ.
ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳ ಪೈಕಿ 5,82,316 ಮಂದಿ ಉತ್ತೀರ್ಣರಾಗಿದ್ದು, 2,28,734 ಅನುತ್ತೀರ್ಣರಾಗಿದ್ದಾರೆ. ಈ ಬಾರಿ ಒಟ್ಟು ಶೇ.71.80 ಫಲಿತಾಂಶ ಬಂದಿದೆ. ಕಳೆದ ಸಾಲಿನಲ್ಲಿ ಶೇ 73.70 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ. 66.41 ಬಾಲಕರು ಮತ್ತು ಶೇ.77.74 ಬಾಲಕಿಯರು ಉತ್ತೀರ್ಣರಾಗಿದ್ದಾರೆ.
ಒಟ್ಟು 227 ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆದಿತ್ತು. 52,219 ಮೌಲ್ಯಮಾಪಕರು 8 ಲಕ್ಷ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಸಿದ್ದರು,
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…