Featured

SSLC ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ -Vishwanews24

SSLC ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ -Vishwanews24

ಬೆಂಗಳೂರು : ಕೊರೊನಾ ವೈರಸ್ ಇಳಿಕೆಯಾಗುತ್ತಿರುವ ಕಾರಣ ಜುಲೈ ಅಂತ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಆಯೋಜಿಸುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲಾ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಶಿಕ್ಷಣ ಇಲಾಖೆ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಈ ಬಾರಿ ಬೇರೆ ಮಾದರಿಯ ಪ್ರಶ್ನೆ ಪತ್ರಿಕೆಗಳನ್ನು ನೀಡುತ್ತಿರುವ ಕಾರಣ ಗೊಂದಲ ಮೂಡದಿರಲೆಂದು ಶಿಕ್ಷಣ ಇಲಾಖೆ ತನ್ನ ಅಧಿಕೃತ ವೆಬ್ ಸೈಟ್ sslc.karnataka.gov.in ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪ್ರಕಟಿಸಿದೆ.

ಮೂರು ದಿನಗಳ ಹಿಂದೆ ಗಣಿ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳ ಪ್ರಶ್ನೆ ಪತ್ರಿಕೆ ನೀಡಲಾಗಿತ್ತು. ಈಗ ಭಾಷಾ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಯನ್ನೂ ಪ್ರಕಟಿಸಲಾಗಿದೆ. ಮಾದರಿ ಪ್ರಶ್ನೆ ಪತ್ರಿಕೆ ಶಿಕ್ಷಣ ಇಲಾಖೆಯ ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ಪ್ರಥಮ ಭಾಷೆ ಕನ್ನಡ, ಪ್ರಥಮ ಭಾಷೆ ಉರ್ದು, ಪ್ರಥಮ ಇಂಗ್ಲಿಷ್, ಪ್ರಥಮ ಭಾಷೆ ಸಂಸ್ಕೃತ, ದ್ವಿತೀಯ ಭಾಷೆ ಇಂಗ್ಲಿಷ್, ದ್ವಿತೀಯ ಭಾಷೆ ಕನ್ನಡ, ತೃತೀಯ ಭಾಷೆ ಹಿಂದಿ, ತೃತೀಯ ಭಾಷೆ ಇಂಗ್ಲಿಷ್ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆ ನೀಡಲಾಗಿದೆ.

ಪ್ರತಿ ವಿಷಯಕ್ಕೆ ತಲಾ 40 ಅಂಕಗಳಂತೆ ಒಟ್ಟು 120 ಅಂಕದ 2 ಪ್ರಶ್ನೆ ಪತ್ರಿಕೆಗಳನ್ನು ಈ ಬಾರಿ ನೀಡಲಾಗುತ್ತಿದ್ದು, 3 ಗಂಟೆಗಳ ಕಾಲ ಪರೀಕ್ಷೆ ಜರುಗಲಿದೆ. ಪರೀಕ್ಷೆಯಲ್ಲಿ ಎಲ್ಲ ಪ್ರಶ್ನೆಗಳು ಬಹು ಆಯ್ಕೆಗೆ ಸಂಬಂಧಿಸಿದ್ದಾಗಿದ್ದು, ಉತ್ತರಗಳನ್ನು OMR ಶೀಟ್ ನಲ್ಲಿ ನಮೂದಿಸಬೇಕಾಗಿದೆ. ಇದಕ್ಕೆ ಸಂಬಂಧಿಸಿದಂತೆ ಒಎಮ್ ಆರ್ ಶೀಟ್ ಮಾದರಿಯನ್ನೂ ಇಲಾಖೆ ಪ್ರಕಟ ಮಾಡಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

8 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

9 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

9 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

9 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

9 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

10 hours ago