Featured

SSLC-PUC​ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ- ಇನ್ಮುಂದೆ ವರ್ಷಕ್ಕೆ ಮೂರು ಪರೀಕ್ಷೆ , ಫೇಲ್ ಆದರೂ ಮುಂದಿನ ತರಗತಿ ಪ್ರವೇಶಕ್ಕೆ ಅವಕಾಶ – Vishwanews24

SSLC-PUC​ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ- ಇನ್ಮುಂದೆ ವರ್ಷಕ್ಕೆ ಮೂರು ಪರೀಕ್ಷೆ , ಫೇಲ್ ಆದರೂ ಮುಂದಿನ ತರಗತಿ ಪ್ರವೇಶಕ್ಕೆ ಅವಕಾಶ

ಬೆಂಗಳೂರು: ಶಿಕ್ಷಕರ ದಿನಾಚರಣೆ ದಿನವೇ ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ.

2023-24ನೇ ಶೈಕ್ಷಣಿಕ ಸಾಲಿನಿಂದ SSLC, 2nd PUC ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಇದುವರೆಗೆ ವರ್ಷಕ್ಕೆ 2 ಪರೀಕ್ಷೆ ಮಾತ್ರ ನಡೆಸುತ್ತಿದ್ದ ಶಿಕ್ಷಣ ಇಲಾಖೆ ಇನ್ಮುಂದೆ ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿದೆ.

ಶೈಕ್ಷಣಿಕ ಪ್ರಗತಿ, ಅರ್ಥಪೂರ್ಣ ಕಲಿಕೆ, ಜ್ಞಾನಧಾರಣೆ ವೃದ್ಧಿಸುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗಿದ್ದು, ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ನಡೆಸಲಿರುವ 3 ಪರೀಕ್ಷೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ವೇಳಾಪಟ್ಟಿ

ಪರೀಕ್ಷೆ-1 ಮಾರ್ಚ್​​ 1ರಿಂದ ಮಾರ್ಚ್​ 25ರವರೆಗೆ ನಡೆಸಲು ನಿರ್ಧಾರ
ಪರೀಕ್ಷೆ-2 ಮೇ 15ರಿಂದ ಜೂನ್​ 5ರವರೆಗೆ ನಡೆಸಲು ನಿರ್ಧಾರ
ಪರೀಕ್ಷೆ-3 ಜುಲೈ 12ರಿಂದ ಜುಲೈ 30ರವರೆಗೆ ನಡೆಸಲು ನಿರ್ಧಾರ

10ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಿರುವ 3 ಪರೀಕ್ಷೆಗಳ ವೇಳಾಪಟ್ಟಿ
ಪರೀಕ್ಷೆ-1: ಮಾರ್ಚ್​ 30ರಿಂದ ಏಪ್ರಿಲ್​ 15ರವರೆಗೆ ನಡೆಸಲು ನಿರ್ಧಾರ
ಪರೀಕ್ಷೆ-2: ಜೂನ್​ 12ರಿಂದ ಜೂನ್​ 19ರವರೆಗೆ ನಡೆಸಲು ನಿರ್ಧಾರ
ಪರೀಕ್ಷೆ-3: ಜುಲೈ 29ರಿಂದ ಆಗಸ್ಟ್​ 5ರವರೆಗೆ ನಡೆಸಲು ತೀರ್ಮಾನ

ವಿಧಾನಸಸೌಧದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇದನ್ನು ಘೋಷಿಸಿದರು. ಈ ನಿಯಮದ ಪ್ರಕಾರ ವಿದ್ಯಾರ್ಥಿಗಳು, ಕೆಲ ವಿಷಯಗಳಲ್ಲಿ ಫೇಲ್ ಆದರೂ ಮುಂದಿನ ತರಗತಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ.

ಒಟ್ಟು ಅಂಕ ಪೈಕಿ ಕನಿಷ್ಠ ಅಂಕಗಳನ್ನ ತೇರ್ಗಡೆ ಮಾನದಂಡವಾಗಿ ಪರಿಗಣನೆ ಮಾಡಲಾಗುತ್ತದೆ. ಕನಿಷ್ಠ ಅಂಕಗಳೊಂದಿಗೆ ವಿದ್ಯಾರ್ಥಿ ಕೆಲ ವಿಷಯಗಳಲ್ಲಿ ಫೇಲ್ ಆದರೂ ಮುಂದಿನ ತರಗತಿಗೆ ಪ್ರವೇಶಕ್ಕೆ ಅನುಮತಿ ಕಲ್ಪಿಸಲಾಗುತ್ತದೆ. ಕಲಿಕಾ ಗುಣಮಟ್ಟ ಹಾಗೂ ಮಕ್ಕಳ ಆತ್ಮವಿಶ್ವಾಸ ಹೆಚ್ಚಿಸಲು ಸರ್ಕಾರ ಈ ಹೊಸ ನಿಯಮವನ್ನು ಘೋಷಣೆ ಮಾಡಿದೆ

Vishwa News 24

Recent Posts

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

1 hour ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

2 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

2 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

2 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

2 hours ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

2 hours ago