ST’ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ : ಎಸ್ ಟಿ ಸಮುದಾಯದ ನಾಯಕರಿಂದ ನಾಳೆ ಸಿಎಂ ಗೆ ಸನ್ಮಾನ – Vishwanews24
ST ಸಮುದಾಯಕ್ಕೆ ಮೀಸಲಾತಿ ಹೆಚ್ಚಳ : ST ಸಮುದಾಯದ ನಾಯಕರಿಂದ ನಾಳೆ ಸಿಎಂ ಗೆ ಸನ್ಮಾನ
ಬೆಂಗಳೂರು : ಎಸ್ ಟಿ (ST) ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ನಾಳೆ ಎಸ್ ಟಿ ಸಮುದಾಯದ ನಾಯಕರು ಸನ್ಮಾನಿಸಲಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಿನ್ನೆ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಎಸ್ ಟಿ ಸಮುದಾಯಕ್ಕೆ ಶೇ. 3 ರಿಂದ 7 ಕ್ಕೆ ಮೀಸಲಾತಿ ಹೆಚ್ಚಳದ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಎಸ್ ಟಿ ಸಮುದಾಯದ ನಾಯಕರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸನ್ಮಾನ ಏರ್ಪಡಿಸಿದ್ದಾರೆ.
