Featured

UDUPI : ಉಚ್ಚಾಟನೆ ಸ್ವಾಗತಿಸುತ್ತೇನೆ ; ರಘುಪತಿ ಭಟ್ಟರೊಡನೆ ನಿಂತು ಅವರನ್ನು ಗೆಲ್ಲಿಸುತ್ತೇವೆ : ಮಹೇಶ್ ಠಾಕೂರ್ – vishwanews24

ಬಿಜೆಪಿಯಿಂದ ಉಚ್ಚಾಟನೆ ಮಾಡಿರುವುದು ಸ್ವೀಕಾರ, ಸ್ವಾಗತಾರ್ಹ..

ರಘುಪತಿ ಭಟ್ಟರಿಗೆ ಸದಾ ಸಹಕಾರ ನೀಡುವೆ: ಮಹೇಶ್ ಠಾಕೂರ್

ಕಳೆದ 23 ವರ್ಷಗಳಿಂದ ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯನಾಗಿ ಕೆ. ರಘುಪತಿ ಭಟ್ಟರ ಮೂಲಕವೇ ರಾಜಕೀಯ ಪ್ರವೇಶಿಸಿದವನು. ಈ ತನಕವೂ ಮೇರು ಧುರೀಣರೂ ಪ್ರಾತಃ ಸ್ಮರಣೀಯರೂ ಆದ ಡಾ ವಿ.ಎಸ್. ಆಚಾರ್ಯರೂ ಸೇರಿದಂತೆ ಪಕ್ಷದ ಅನೇಕ ನಾಯಕರ ಮಾರ್ಗದರ್ಶನ,ಪ್ರೋತ್ಸಾಹದಿಂದ ಮೂರು ಬಾರಿ ನಗರಸಭಾ ಸದಸ್ಯ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ, ನಗರಾಧ್ಯಕ್ಷ ಹಾಗೂ ಪ್ರಸ್ತುತ ಜಿಲ್ಲಾ ಉಪಾಧ್ಯಕ್ಷ ಸ್ಥಾನದ ವರೆಗೆ ವಿವಿಧ ಜವಾಬ್ದಾರಿಗಳನ್ನು ನೀಡಿದ್ದಕ್ಕೆೆ ಅತ್ಯಂತ ಅಭಾರಿಯಾಗಿದ್ದೇನೆ. ನನಗೆ ಪಕ್ಷ ಮತ್ತು ಮುಖಂಡರ ಶಿಫಾರಸ್ಸಿನಂತೆ ನೀಡಿದ ಎಲ್ಲ ಜವಾಬ್ದಾರಿಗಳನ್ನು ಅತ್ಯಂತ ಪ್ರಾಮಾಣಿಕತೆಯಿಂದ ಶಿರಸಾ ವಹಿಸಿ ನಿರ್ವಹಿಸಿರುವ ಬಗ್ಗೆೆ ನನಗೆ ಅತೀವ ಸಂತೃಪ್ತಿ ಇದೆ. ಇದೀಗ ಪಕ್ಷ ತೆಗೆದುಕೊಂಡು ನಿರ್ಣಯದಂತೆ ನನ್ನನ್ನು ಪಕ್ಷದಿಂದ ಉಚ್ಚಾಟನೆ ಮಾಡಿ, ಜಿಲ್ಲಾಾ ಉಪಾಧ್ಯಕ್ಷ ಸ್ಥಾನದಿಂದ ವಜಾ ಮಾಡಿರುವುದನ್ನೂ ಅಷ್ಟೇ ವಿನಯವಾಗಿ ಸ್ವಾಗತಿಸುತ್ತೇನೆ ಎಂದು ಮಹೇಶ್ ಠಾಕೂರ್ ಪ್ರತಿಕ್ರಿಯಿಸಿದ್ದಾರೆ.

ಆದರೆ ಪ್ರಸ್ತುತ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಸಂದರ್ಭ ಪಕ್ಷದ ರಾಜ್ಯಮಟ್ಟದ ನಾಯಕರು ಕರಾವಳಿಯ ಪ್ರಬುದ್ಧ ಮತದಾರರ ಆಶಯಕ್ಕೆ ವಿರುದ್ಧ ವಾಗಿ ಕೈಗೊಂಡಿರುವ ತೀರ್ಮಾನ ಮತ್ತು ಮಾಜಿ ಶಾಸಕರೂ, ನಮ್ಮ ಮಾರ್ಗದರ್ಶಕರೂ, ಮೂರು ಬಾರಿ ಶಾಸಕರಾಗಿ ‘ನವ ಉಡುಪಿಯ ಅಭಿವೃದ್ಧಿಯ ಹರಿಕಾರ’ರೆಂದೇ ಜನಮನ್ನಣೆ ಪಡೆದ ಮಗುವಿನಂತಹ ಮನಸ್ಸುಳ್ಳ ಸದಾ ಅಭಿವೃದ್ಧಿಯ ಮಂತ್ರವನ್ನೇ ಜಪಿಸುವ ಕೆ. ರಘುಪತಿ ಭಟ್ಟರಿಗೆ ಸ್ಪರ್ಧಿಸಲು ಅವಕಾಶ ನೀಡದೇ ವಂಚಿಸಿರುವುದು ಅರಗಿಸಿಕೊಳ್ಳಲು ಕಷ್ಟಸಾಧ್ಯವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲೂ ಭಟ್ಟರಿಗೆ ವಂಚನೆಯಾದಾಗ ಪಕ್ಷದ ಹಿತದೃಷ್ಟಿಯಿಂದ ಬಂಡಾಯ ಏಳದೇ ಚುನಾವಣೆಯಲ್ಲಿ ಒಂದಾಗಿ ಕೆಲಸ ಮಾಡಿ ಪಕ್ಷದ ಗೆಲುವಿಗೆ ಶ್ರಮಿಸಿದ್ದೇವೆ. ಆದರೆ ಎರಡನೇ ಬಾರಿ ಪಕ್ಷದ ನಾಯಕರಿಂದ ಆಗಿರುವ ತೀವ್ರ ತಪ್ಪುು ಅತ್ಯಂತ ವಿಷಾದನೀಯ.

ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ತೀರಾ ಆಘಾತಕಾರಿಯಾಗಿದೆ. ಇದಕ್ಕೆೆ ಶೀಘ್ರ ಪರಿಹಾರ ಕಂಡುಕೊಳ್ಳದೇ ಇದ್ದರೆ ಪಕ್ಷಕ್ಕೆೆ ದೊಡ್ಡ ಮಟ್ಟದ ಹಾನಿ ತಪ್ಪಿದ್ದಲ್ಲ. ಆದ್ದರಿಂದ ಪಕ್ಷದ ಕಾರ್ಯಕರ್ತರು ಮತ್ತು ಹಿತೈಷಿಗಳೇ ಪಕ್ಷದ ಒಳಿತಿಗಾಗಿ ಭಟ್ಟರನ್ನು ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿರುವ ಹಿನ್ನೆೆಲೆಯಲ್ಲಿ ಒತ್ತಡ ಒತ್ತಾಯಕ್ಕೆೆ ಮಣಿದು ಭಟ್ಟರು ಸ್ಪರ್ಧಿಸುತ್ತಿದ್ದಾರೆ. ಖಂಡಿತವಾಗಿಯೂ ಇದು ಪಕ್ಷದ ವಿರುದ್ಧವಲ್ಲ ಎನ್ನುವುದನ್ನು ಮತ್ತೊೊಮ್ಮೆ ಸ್ಪಷ್ಟಪಡಿಸುತ್ತೇನೆ. ಆದರೆ ಈ ಸಂದರ್ಭದಲ್ಲಿ ಭಟ್ಟರೊಡನೆ ನಿಂತು ಅವರನ್ನು ಗೆಲ್ಲಿಸಲೇ ಬೇಕಾದ ಅನಿವಾರ್ಯತೆ ನನ್ನಂತಹ ಅದೆಷ್ಟೋ ಕಾರ್ಯಕರ್ತರಿಗಿದೆ. ಈಗಲೂ ಹಾಗೂ ಚುನಾವಣೆಯಲ್ಲಿ ಗೆದ್ದ ಅನಂತರವೂ ಭಟ್ಟರೊಂದಿಗೆ ನಾವು ಮತ್ತೆೆ ಪಕ್ಷದವರೇ ಆಗಿದ್ದೇವೆ, ಆಗಿರುತ್ತೇವೆ.

ಆದರೆ ಸದ್ಯದ ಪರಿಸ್ಥಿತಿಯಲ್ಲಿ ಕಠೋರ ವಾಸ್ತವವನ್ನು ಜಿಲ್ಲೆೆಯ ಪಕ್ಷದ ನಾಯಕರು ಅರ್ಥ ಮಾಡಿಕೊಳ್ಳದ ಸ್ಥಿತಿಯಲ್ಲಿ ಇರುವುದರಿಂದ ಅವರ ತೀರ್ಮಾನವನ್ನು ಖಂಡಿತವಾಗಿಯೂ ಪ್ರಶ್ನಿಸುವುದಿಲ್ಲ. ಇದು ತಾತ್ಕಾಲಿಕವೂ ಆಗಿದೆ. ರಘುಪತಿ ಭಟ್ಟರ ವಿಜಯದೊಂದಿಗೆ ಕರಾವಳಿಯ ಸುಶಿಕ್ಷಿತರಿಗೆ ನ್ಯಾಾಯ ಒದಗಿಸಿದ ಬಳಿಕ ನಾಯಕರಿಗೆ ಜ್ಞಾನೋದಯವಾಗುವುದು ನಿಶ್ಚಿತ. ಆದ್ದರಿಂದ ಎಲ್ಲವೂ ಸುಖಾಂತ್ಯವಾಗಿ ಪಕ್ಷಕ್ಕೆೆ ರಾಜ್ಯದಲ್ಲಿ ಭವಿಷ್ಯವನ್ನು ಸುದೃಢಗೊಳಿಸುವ ನಿಟ್ಟಿನಿಲ್ಲಿ ಭಟ್ಟರು ಕೈಗೊಂಡ ತೀರ್ಮಾನವನ್ನು ಸಮ್ಮತಿಸಿ ಅವರೊಂದಿಗೆ ಚುನಾವಣೆಯಲ್ಲಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಪಕ್ಷ ನನ್ನ ಮೇಲೆ ಕೈಗೊಂಡ ತೀರ್ಮಾನವನ್ನು ಯಾವುದೇ ಮುನಿಸಿಲ್ಲದೆ ಮನಸಾರೆ ಒಪ್ಪಿ ಸ್ವೀಕರಿಸುತ್ತೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

16 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

16 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

17 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

17 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

17 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

17 hours ago