Featured

Udupi :ಕಳಚಿ ಬಿದ್ದ ತುಲಾಭಾರದ ತಕ್ಕಡಿ ಹಗ್ಗ :  ಅಪಾಯದಿಂದ ಪಾರದ ಪೇಜಾವರ ಶ್ರೀ – vishwanews24

Udupi :ಕಳಚಿ ಬಿದ್ದ ತುಲಾಭಾರದ ತಕ್ಕಡಿ ಹಗ್ಗ :  ಅಪಾಯದಿಂದ ಪಾರದ ಪೇಜಾವರ ಶ್ರೀ

ಉಡುಪಿ : ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳಿಗೆ 60 ತುಂಬಿದ ಹಿನ್ನೆಲೆಯಲ್ಲಿ ನಡೆದ ಪ್ರಸನ್ನಾಭಿನಂದನ ಕಾರ್ಯಕ್ರಮದ ವೇಳೆ ಅಚಾತುರ್ಯ ಘಟನೆಯೊಂದು ನಡೆದಿದ್ದು ಸುದೈವ ಹೆಚ್ಚಿನ ಅನಾಹುತವೇನೂ ಆಗಿಲ್ಲ.

ಪ್ರಸ್ತುತ ದೆಹಲಿ ಪ್ರವಾಸದಲ್ಲಿರುವ ಉಡುಪಿ ಪೇಜಾವರ ಶ್ರೀ ದೆಹಲಿಯ ಪೇಜಾವರ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮಹತ್ವದ ಧಾರ್ಮಿಕ ಆಚರಣೆಯಾದ ಚಾತುರ್ಮಾಸ್ಯ ಕಾರ್ಯಕ್ರಮ ಪೂರ್ಣಗೊಳಿಸಿ ಬಂದ ಹಿನ್ನೆಲೆಯಲ್ಲಿ ಪೇಜಾವರ ಶ್ರೀಗಳಿಗೆ ಭಕ್ತರು ತುಲಾಭಾರ ಸೇವೆ ನಡೆಸುತ್ತಿದ್ದಾಗ ತಕ್ಕಡಿಯ ಹಗ್ಗ ಕಳಚಿ ಬಿದ್ದಿದೆ. ತಕ್ಕಡಿಯ ಕಬ್ಬಿಣದ ಅಡ್ಡ ಪಟ್ಟಿ ಕಳಚಿ ಪೇಜಾವರ ಶ್ರೀಗಳ ತಲೆಯ ಮೇಲೆ ಬಿದ್ದಿದೆ. ತಲೆಗೆ ಚಿಕ್ಕ ಗಾಯವಾಗಿದ್ದು, ಪೇಜಾವರ ಶ್ರೀಗಳು ಅಪಾಯದಿಂದ ಪಾರಾಗಿದ್ದಾರೆ. ತರಚಿದ ಗಾಯದೊಂದಿಗೆ ಪೇಜಾವರ ಶ್ರೀಗಳು ಸುರಕ್ಷಿತವಾಗಿದ್ದಾರೆ ಎಂದು ಭಕ್ತರು ತಿಳಿಸಿದ್ದಾರೆ. ತಕ್ಕಡಿ ಕುಸಿದು ಬೀಳುತ್ತಿದ್ದಂತೆ ಭಕ್ತರು ಆತಂಕಗೊಂಡರು. ಆದರೆ ಕೈ ಸನ್ನೆಯ ಮೂಲಕ ತಮಗೆ ಏನೂ ಆಗಿಲ್ಲ ಎಂದು ಪೇಜಾವರ ಶ್ರೀ ನಗುಮುಖ ಸೂಸಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು, ತುಲಾಭಾರ ಕಾರ್ಯಕ್ರಮದಲ್ಲಿ ತಕ್ಕಡಿ ಹಗ್ಗ ನನ್ನ ತಲೆಯ ಮೇಲೆ ಕಳಚಿ ಬಿತ್ತು. ಅದರಿಂದಾದ ಗಾಯ ಪೂರ್ಣ ಮಾಸಿಹೋಗಿದೆ. ಗಾಯದ ಕುರುಹು ಸಹ ಇಲ್ಲದಂತೆ ವಾಸಿಯಾಗಿದೆ. ದೊಡ್ಡ ಗಾಯ ಏನೂ ಆಗಿಲ್ಲ, ನಾನು ಆರಾಮವಾಗಿದ್ದೇನೆ. ಯಾರು ಗಾಬರಿಯಾಗಬೇಕಾಗಿಲ್ಲ, ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಹೇಳಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

12 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

12 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago