Featured

Udupi :ಕಳಚಿ ಬಿದ್ದ ತುಲಾಭಾರದ ತಕ್ಕಡಿ ಹಗ್ಗ :  ಅಪಾಯದಿಂದ ಪಾರದ ಪೇಜಾವರ ಶ್ರೀ – vishwanews24

Udupi :ಕಳಚಿ ಬಿದ್ದ ತುಲಾಭಾರದ ತಕ್ಕಡಿ ಹಗ್ಗ :  ಅಪಾಯದಿಂದ ಪಾರದ ಪೇಜಾವರ ಶ್ರೀ

ಉಡುಪಿ : ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳಿಗೆ 60 ತುಂಬಿದ ಹಿನ್ನೆಲೆಯಲ್ಲಿ ನಡೆದ ಪ್ರಸನ್ನಾಭಿನಂದನ ಕಾರ್ಯಕ್ರಮದ ವೇಳೆ ಅಚಾತುರ್ಯ ಘಟನೆಯೊಂದು ನಡೆದಿದ್ದು ಸುದೈವ ಹೆಚ್ಚಿನ ಅನಾಹುತವೇನೂ ಆಗಿಲ್ಲ.

ಪ್ರಸ್ತುತ ದೆಹಲಿ ಪ್ರವಾಸದಲ್ಲಿರುವ ಉಡುಪಿ ಪೇಜಾವರ ಶ್ರೀ ದೆಹಲಿಯ ಪೇಜಾವರ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮಹತ್ವದ ಧಾರ್ಮಿಕ ಆಚರಣೆಯಾದ ಚಾತುರ್ಮಾಸ್ಯ ಕಾರ್ಯಕ್ರಮ ಪೂರ್ಣಗೊಳಿಸಿ ಬಂದ ಹಿನ್ನೆಲೆಯಲ್ಲಿ ಪೇಜಾವರ ಶ್ರೀಗಳಿಗೆ ಭಕ್ತರು ತುಲಾಭಾರ ಸೇವೆ ನಡೆಸುತ್ತಿದ್ದಾಗ ತಕ್ಕಡಿಯ ಹಗ್ಗ ಕಳಚಿ ಬಿದ್ದಿದೆ. ತಕ್ಕಡಿಯ ಕಬ್ಬಿಣದ ಅಡ್ಡ ಪಟ್ಟಿ ಕಳಚಿ ಪೇಜಾವರ ಶ್ರೀಗಳ ತಲೆಯ ಮೇಲೆ ಬಿದ್ದಿದೆ. ತಲೆಗೆ ಚಿಕ್ಕ ಗಾಯವಾಗಿದ್ದು, ಪೇಜಾವರ ಶ್ರೀಗಳು ಅಪಾಯದಿಂದ ಪಾರಾಗಿದ್ದಾರೆ. ತರಚಿದ ಗಾಯದೊಂದಿಗೆ ಪೇಜಾವರ ಶ್ರೀಗಳು ಸುರಕ್ಷಿತವಾಗಿದ್ದಾರೆ ಎಂದು ಭಕ್ತರು ತಿಳಿಸಿದ್ದಾರೆ. ತಕ್ಕಡಿ ಕುಸಿದು ಬೀಳುತ್ತಿದ್ದಂತೆ ಭಕ್ತರು ಆತಂಕಗೊಂಡರು. ಆದರೆ ಕೈ ಸನ್ನೆಯ ಮೂಲಕ ತಮಗೆ ಏನೂ ಆಗಿಲ್ಲ ಎಂದು ಪೇಜಾವರ ಶ್ರೀ ನಗುಮುಖ ಸೂಸಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು, ತುಲಾಭಾರ ಕಾರ್ಯಕ್ರಮದಲ್ಲಿ ತಕ್ಕಡಿ ಹಗ್ಗ ನನ್ನ ತಲೆಯ ಮೇಲೆ ಕಳಚಿ ಬಿತ್ತು. ಅದರಿಂದಾದ ಗಾಯ ಪೂರ್ಣ ಮಾಸಿಹೋಗಿದೆ. ಗಾಯದ ಕುರುಹು ಸಹ ಇಲ್ಲದಂತೆ ವಾಸಿಯಾಗಿದೆ. ದೊಡ್ಡ ಗಾಯ ಏನೂ ಆಗಿಲ್ಲ, ನಾನು ಆರಾಮವಾಗಿದ್ದೇನೆ. ಯಾರು ಗಾಬರಿಯಾಗಬೇಕಾಗಿಲ್ಲ, ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಹೇಳಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

40 minutes ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 hour ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

3 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

3 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

4 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

4 hours ago