Featured

UDUPI : ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪದಿಂದ ತಂದೆ ದೋಷಮುಕ್ತ – vishwanews24

ಕಾಪು: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪದಿಂದ ತಂದೆ ದೋಷಮುಕ್ತ

ಕಾಪು: ಅಪ್ರಾಪ್ತ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರವೆಸಗಿದ ಆರೋಪದಲ್ಲಿ ಪೋಕ್ಸೋ ಪ್ರಕರಣಕ್ಕೆ ಗುರಿಯಾಗಿದ್ದ ತಂದೆ, ಉಚ್ಚಿಲದ ಭಾಸ್ಕರ ನಗರ ನಿವಾಸಿ ಸೈಯದ್‌ ಮುಸ್ತಕೀಮ್‌ ಅಹ್ಮದ್‌ (39) ನನ್ನು ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ದೋಷಮುಕ್ತಗೊಳಿಸಿ ಆದೇಶ ಹೊರಡಿಸಿದೆ.

ಪ್ರಕರಣದ ವಿವರ: ಉಚ್ಚಿಲದ ಭಾಸ್ಕರ ನಗರ ನಿವಾಸಿ ಸೈಯದ್‌ ಮುಸ್ತಕೀಮ್‌ ಅಹ್ಮದ್‌ 2019ರ ನ. 30ರಿಂದ ಡಿ. 15ರ ನಡುವಿನ ಅವಧಿಯಲ್ಲಿ ತನ್ನ 7 ಮತ್ತು 14 ವರ್ಷದ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರವೆಸಗಿದ್ದಾನೆ ಎಂದು ಆತನ ಪತ್ನಿ ನಫೀಸಾ ನುಸ್ರತ್‌ ಪಡುಬಿದ್ರಿ ಪೊಲೀಸ್‌ ಠಾಣೆಗೆ 2020ರ ಮಾ. 20ರಂದು ದೂರು ನೀಡಿದ್ದಳು. ಈ ಬಗ್ಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಈ ಬಗ್ಗೆ ಅಂದಿನ ಕಾಪು ಪೊಲೀಸ್‌ ವೃತ್ತ ನಿರೀಕ್ಷಕ ಮಹೇಶ್‌ ಪ್ರಸಾದ್‌ ತನಿಖೆ ನಡೆಸಿ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಸಂಚು ರೂಪಿಸಿದ್ದಳೇ ಪತ್ನಿ?: ಸೈಯದ್‌ ಮುಸ್ತಕೀಮ್‌ ಅಹ್ಮದ್‌ ಮದುವೆಯ ಅನಂತರ ಕೆಲವು ವರ್ಷ ವಿದೇಶದಲ್ಲಿ ಚಾಲಕನಾಗಿ ದುಡಿದಿದ್ದು 2019ರಲ್ಲಿ ಊರಿಗೆ ಬಂದು ನೆಲೆಸಿದ್ದ. ಈ ನಡುವೆ ಆತನ ಪತ್ನಿ ನಫೀಸಾ ನುಸ್ರತ್‌ ಕಾಪು ಮಲ್ಲಾರಿನ ನಿವಾಸಿ ಯು.ಎ. ರಶೀದ್‌ ಎಂಬಾತನೊಂದಿಗೆ ಅಕ್ರಮ ಸಂಬಂಧದಲ್ಲಿರುವುದು ಬೆಳಕಿಗೆ ಬಂದಿತ್ತು. ಈ ವಿಷಯದಲ್ಲಿ ಪತಿ, ಪತ್ನಿಗೆ ಆಗಾಗ ಗಲಾಟೆಯೂ ನಡೆಯುತ್ತಿತ್ತು. ಇದೇ ಕಾರಣದಿಂದಾಗಿ ನಫೀಸಾ, ತನ್ನ ಸ್ನೇಹಿತ ರಶೀದ್‌ನೊಂದಿಗೆ ಸೇರಿಕೊಂಡು ಪತಿಯ ವಿರುದ್ಧ ಸಂಚು ರೂಪಿಸಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿಸಿದ್ದಳು ಎನ್ನಲಾಗಿದೆ.

ಸಂಚು ಬೆಳಕಿಗೆ ಬಂದದ್ದು ಹೇಗೆ?: ಸೈಯದ್‌ ಮುಸ್ತಕೀಮ್‌ ಅಹ್ಮದ್‌ ಜೈಲು ಸೇರಿದ ಬಳಿಕ ಆತನ ಪತ್ನಿ ನಫೀಸಾ ನಸ್ರುತ್‌ ಸ್ನೇಹಿತ ರಶೀದ್‌ ಜತೆ ಗುಪ್ತವಾಗಿ ಮದುವೆಯಾಗಿದ್ದು, 2021ರ ಡಿ. 15ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದ ವಿಚಾರ ಬೆಳಕಿಗೆ ಬಂದಿತ್ತು. ಈ ಬಗ್ಗೆಯೂ ಕಾಪು ಪೊಲೀಸರಿಗೆ ದೂರು ನೀಡಲಾಗಿತ್ತು. ವಿಚಾರಣೆ ಸಂದರ್ಭ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಆಕೆ ಗಂಡು ಮಗುವಿಗೆ ಜನ್ಮ ನೀಡಿರುವುದನ್ನು ಖಚಿತ ಪಡಿಸಿದ್ದರು. ಮಾತ್ರವಲ್ಲದೆ ಆಸ್ಪತ್ರೆಯಲ್ಲಿ ಗಂಡನ ಹೆಸರನ್ನು ಯು.ಎ. ರಶೀದ್‌ ಎಂದು ನಮೂದಿಸಿರುವುದಾಗಿಯೂ ತಿಳಿಸಿದ್ದರು.
ತನಿಖೆ ವೇಳೆ ಆಕೆ ತಾನು ರಶೀದ್‌ನನ್ನು ಮದುವೆಯಾಗಿದ್ದು ಗಂಡು ಮಗುವಿಗೆ ಜನ್ಮ ನೀಡಿರುವುದಾಗಿ ಕೈಬರಹದ ಹೇಳಿಕೆ ಕೊಟ್ಟಿದ್ದಳು. ಬಳಿಕ ಕಾಪು ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ ಅವರನ್ನು ವಿಚಾರಣೆಗೊಳಪಡಿಸಲಾಗಿತ್ತು.

ವಾದ ಪ್ರತಿವಾದಗಳನ್ನು ಆಲಿಸಿದ ಉಡುಪಿ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅವರು ಆರೋಪಿಯನ್ನು ಆರೋಪದಿಂದ ಖುಲಾಸೆಗೊಳಿಸಿದ್ದಾರೆ. ಉಡುಪಿಯ ನ್ಯಾಯವಾದಿಗಳಾದ ಪಾಂಗಾಳ ಹರೀಶ್‌ ಶೆಟ್ಟಿ ಮತ್ತು ನಮಿತಾ ಕೆ. ಆರೋಪಿಯ ಪರವಾಗಿ ವಾದಿಸಿದ್ದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

10 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

11 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

13 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

13 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

14 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

14 hours ago