Featured

UDUPI : ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪದಿಂದ ತಂದೆ ದೋಷಮುಕ್ತ – vishwanews24

ಕಾಪು: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪದಿಂದ ತಂದೆ ದೋಷಮುಕ್ತ

ಕಾಪು: ಅಪ್ರಾಪ್ತ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರವೆಸಗಿದ ಆರೋಪದಲ್ಲಿ ಪೋಕ್ಸೋ ಪ್ರಕರಣಕ್ಕೆ ಗುರಿಯಾಗಿದ್ದ ತಂದೆ, ಉಚ್ಚಿಲದ ಭಾಸ್ಕರ ನಗರ ನಿವಾಸಿ ಸೈಯದ್‌ ಮುಸ್ತಕೀಮ್‌ ಅಹ್ಮದ್‌ (39) ನನ್ನು ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ದೋಷಮುಕ್ತಗೊಳಿಸಿ ಆದೇಶ ಹೊರಡಿಸಿದೆ.

ಪ್ರಕರಣದ ವಿವರ: ಉಚ್ಚಿಲದ ಭಾಸ್ಕರ ನಗರ ನಿವಾಸಿ ಸೈಯದ್‌ ಮುಸ್ತಕೀಮ್‌ ಅಹ್ಮದ್‌ 2019ರ ನ. 30ರಿಂದ ಡಿ. 15ರ ನಡುವಿನ ಅವಧಿಯಲ್ಲಿ ತನ್ನ 7 ಮತ್ತು 14 ವರ್ಷದ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರವೆಸಗಿದ್ದಾನೆ ಎಂದು ಆತನ ಪತ್ನಿ ನಫೀಸಾ ನುಸ್ರತ್‌ ಪಡುಬಿದ್ರಿ ಪೊಲೀಸ್‌ ಠಾಣೆಗೆ 2020ರ ಮಾ. 20ರಂದು ದೂರು ನೀಡಿದ್ದಳು. ಈ ಬಗ್ಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಈ ಬಗ್ಗೆ ಅಂದಿನ ಕಾಪು ಪೊಲೀಸ್‌ ವೃತ್ತ ನಿರೀಕ್ಷಕ ಮಹೇಶ್‌ ಪ್ರಸಾದ್‌ ತನಿಖೆ ನಡೆಸಿ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಸಂಚು ರೂಪಿಸಿದ್ದಳೇ ಪತ್ನಿ?: ಸೈಯದ್‌ ಮುಸ್ತಕೀಮ್‌ ಅಹ್ಮದ್‌ ಮದುವೆಯ ಅನಂತರ ಕೆಲವು ವರ್ಷ ವಿದೇಶದಲ್ಲಿ ಚಾಲಕನಾಗಿ ದುಡಿದಿದ್ದು 2019ರಲ್ಲಿ ಊರಿಗೆ ಬಂದು ನೆಲೆಸಿದ್ದ. ಈ ನಡುವೆ ಆತನ ಪತ್ನಿ ನಫೀಸಾ ನುಸ್ರತ್‌ ಕಾಪು ಮಲ್ಲಾರಿನ ನಿವಾಸಿ ಯು.ಎ. ರಶೀದ್‌ ಎಂಬಾತನೊಂದಿಗೆ ಅಕ್ರಮ ಸಂಬಂಧದಲ್ಲಿರುವುದು ಬೆಳಕಿಗೆ ಬಂದಿತ್ತು. ಈ ವಿಷಯದಲ್ಲಿ ಪತಿ, ಪತ್ನಿಗೆ ಆಗಾಗ ಗಲಾಟೆಯೂ ನಡೆಯುತ್ತಿತ್ತು. ಇದೇ ಕಾರಣದಿಂದಾಗಿ ನಫೀಸಾ, ತನ್ನ ಸ್ನೇಹಿತ ರಶೀದ್‌ನೊಂದಿಗೆ ಸೇರಿಕೊಂಡು ಪತಿಯ ವಿರುದ್ಧ ಸಂಚು ರೂಪಿಸಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿಸಿದ್ದಳು ಎನ್ನಲಾಗಿದೆ.

ಸಂಚು ಬೆಳಕಿಗೆ ಬಂದದ್ದು ಹೇಗೆ?: ಸೈಯದ್‌ ಮುಸ್ತಕೀಮ್‌ ಅಹ್ಮದ್‌ ಜೈಲು ಸೇರಿದ ಬಳಿಕ ಆತನ ಪತ್ನಿ ನಫೀಸಾ ನಸ್ರುತ್‌ ಸ್ನೇಹಿತ ರಶೀದ್‌ ಜತೆ ಗುಪ್ತವಾಗಿ ಮದುವೆಯಾಗಿದ್ದು, 2021ರ ಡಿ. 15ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದ ವಿಚಾರ ಬೆಳಕಿಗೆ ಬಂದಿತ್ತು. ಈ ಬಗ್ಗೆಯೂ ಕಾಪು ಪೊಲೀಸರಿಗೆ ದೂರು ನೀಡಲಾಗಿತ್ತು. ವಿಚಾರಣೆ ಸಂದರ್ಭ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಆಕೆ ಗಂಡು ಮಗುವಿಗೆ ಜನ್ಮ ನೀಡಿರುವುದನ್ನು ಖಚಿತ ಪಡಿಸಿದ್ದರು. ಮಾತ್ರವಲ್ಲದೆ ಆಸ್ಪತ್ರೆಯಲ್ಲಿ ಗಂಡನ ಹೆಸರನ್ನು ಯು.ಎ. ರಶೀದ್‌ ಎಂದು ನಮೂದಿಸಿರುವುದಾಗಿಯೂ ತಿಳಿಸಿದ್ದರು.
ತನಿಖೆ ವೇಳೆ ಆಕೆ ತಾನು ರಶೀದ್‌ನನ್ನು ಮದುವೆಯಾಗಿದ್ದು ಗಂಡು ಮಗುವಿಗೆ ಜನ್ಮ ನೀಡಿರುವುದಾಗಿ ಕೈಬರಹದ ಹೇಳಿಕೆ ಕೊಟ್ಟಿದ್ದಳು. ಬಳಿಕ ಕಾಪು ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ ಅವರನ್ನು ವಿಚಾರಣೆಗೊಳಪಡಿಸಲಾಗಿತ್ತು.

ವಾದ ಪ್ರತಿವಾದಗಳನ್ನು ಆಲಿಸಿದ ಉಡುಪಿ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅವರು ಆರೋಪಿಯನ್ನು ಆರೋಪದಿಂದ ಖುಲಾಸೆಗೊಳಿಸಿದ್ದಾರೆ. ಉಡುಪಿಯ ನ್ಯಾಯವಾದಿಗಳಾದ ಪಾಂಗಾಳ ಹರೀಶ್‌ ಶೆಟ್ಟಿ ಮತ್ತು ನಮಿತಾ ಕೆ. ಆರೋಪಿಯ ಪರವಾಗಿ ವಾದಿಸಿದ್ದರು.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

9 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

10 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

10 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

10 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

10 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

11 hours ago