Featured

Udupi : ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾಗಿ ಯಶ್ಪಾಲ್ ಸುವರ್ಣ ಅವಿರೋಧವಾಗಿ ಪುನರಾಯ್ಕೆ – vishwanews24

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾಗಿ ಯಶ್ಪಾಲ್ ಸುವರ್ಣ ಅವಿರೋಧವಾಗಿ ಪುನರಾಯ್ಕೆ

ಉಡುಪಿ : ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.

ಬ್ಯಾಂಕಿನ 2023-28 ನೇ ಸಾಲಿನ 5 ವರ್ಷಗಳ ಅವಧಿಯ ಅಡಳಿತ ಮಂಡಳಿಗೆ ಎಲ್ಲಾ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದು,

ಬ್ಯಾಂಕಿನ ಉಪಾಧ್ಯಕ್ಷರಾಗಿ ವಾಸುದೇವ ಸಾಲ್ಯಾನ್, ನಿರ್ದೇಶಕರಾಗಿ ಕೆ ಸಂಜೀವ ಶ್ರೀಯಾನ್, ವೆಂಕಟರಮಣ ಕಿದಿಯೂರು, ಶಶಿಕಾಂತ ಬಿ ಕೋಟ್ಯಾನ್, ಶೋಭೇಂದ್ರ, ವಿನಯ ಕರ್ಕೇರ, ನಾರಾಯಣ ಟಿ ಅಮೀನ್, ರಾಮ ನಾಯ್ಕ್ ಎಚ್, ಶಿವರಾಮ ಕುಂದರ್, ಸುರೇಶ ಬಿ ಕರ್ಕೇರ, ಸದಾನಂದ ಬಳ್ಕೂರು, ವನಜ ಹೆಚ್ ಕಿದಿಯೂರು, ವನಜ ಜೆ ಪುತ್ರನ್, ಮನೋಜ್ ಆಯ್ಕೆಯಾಗಿದ್ದಾರೆ.

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳ ಮೂಲಕ ವ್ಯವಹಾರ ನಡೆಸುತ್ತಿದ್ದು, 2022-23 ನೇ ಸಾಲಿನಲ್ಲಿ ಬ್ಯಾಂಕ್ 9,464 ಕೋಟಿ ವಾರ್ಷಿಕ ವಹಿವಾಟು ನಡೆಸಿದ್ದು, ಕಳೆದ 14 ವರ್ಷಗಳಿಂದ ನಿರಂತರವಾಗಿ ಸದಸ್ಯರಿಗೆ ಶೇಕಡಾ 18% ಡಿವಿಡೆಂಡ್ ನೀಡುವ ಕರಾವಳಿ ಕರ್ನಾಟಕದ ಏಕೈಕ ಪಟ್ಟಣ ಸಹಕಾರ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

2008 ರಿಂದ ಬ್ಯಾಂಕಿನ ನಿರ್ದೇಶಕರಾಗಿ ನಿರಂತರವಾಗಿ ಸೇವೆ ಸಲ್ಲಿಸಿರುವ ಯಶ್ ಪಾಲ್ ಸುವರ್ಣ 2018 ರಲ್ಲಿ ಬ್ಯಾಂಕಿನ ಅಧ್ಯಕ್ಷರಾಗಿ ಸಂಸ್ಥೆಯ ಸಾರಥ್ಯ ವಹಿಸಿ ಬ್ಯಾಂಕ್ ಸರ್ವಾಂಗೀಣ ಪ್ರಗತಿ ಸಾಧಿಸುವಲ್ಲಿ ಪ್ರಮುಖ ಪಾತ್ರವಹಿಸಿ ಇದೀಗ ಮತ್ತೊಮ್ಮೆ ಬ್ಯಾಂಕಿನ ಅಧ್ಯಕ್ಷರಾಗಿ ಸಂಸ್ಥೆಯನ್ನು ಮುನ್ನಡೆಸಲಿದ್ದಾರೆ.

2014 ರಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾಗಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ, ಹಲವಾರು ಸಹಕಾರಿ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಯಶ್ ಪಾಲ್ ಸುವರ್ಣ ತಮ್ಮ ಸಹಕಾರ ಕ್ಷೇತ್ರದ ಸಾಧನೆಗಾಗಿ 69ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ 2022 ನೇ ಸಾಲಿನ ಸಹಕಾರ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಸಹಕಾರ ರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ, ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಮೀನುಗಾರಿಕೆ ಕ್ಷೇತ್ರದಲ್ಲಿ ತಮ್ಮ ಕಾರ್ಯವೈಖರಿಯಿಂದ ಗುರುತಿಸಿಕೊಂಡಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

10 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

12 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

12 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

12 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

12 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

13 hours ago