Featured

Udupi : ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾಗಿ ಯಶ್ಪಾಲ್ ಸುವರ್ಣ ಅವಿರೋಧವಾಗಿ ಪುನರಾಯ್ಕೆ – vishwanews24

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾಗಿ ಯಶ್ಪಾಲ್ ಸುವರ್ಣ ಅವಿರೋಧವಾಗಿ ಪುನರಾಯ್ಕೆ

ಉಡುಪಿ : ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.

ಬ್ಯಾಂಕಿನ 2023-28 ನೇ ಸಾಲಿನ 5 ವರ್ಷಗಳ ಅವಧಿಯ ಅಡಳಿತ ಮಂಡಳಿಗೆ ಎಲ್ಲಾ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದು,

ಬ್ಯಾಂಕಿನ ಉಪಾಧ್ಯಕ್ಷರಾಗಿ ವಾಸುದೇವ ಸಾಲ್ಯಾನ್, ನಿರ್ದೇಶಕರಾಗಿ ಕೆ ಸಂಜೀವ ಶ್ರೀಯಾನ್, ವೆಂಕಟರಮಣ ಕಿದಿಯೂರು, ಶಶಿಕಾಂತ ಬಿ ಕೋಟ್ಯಾನ್, ಶೋಭೇಂದ್ರ, ವಿನಯ ಕರ್ಕೇರ, ನಾರಾಯಣ ಟಿ ಅಮೀನ್, ರಾಮ ನಾಯ್ಕ್ ಎಚ್, ಶಿವರಾಮ ಕುಂದರ್, ಸುರೇಶ ಬಿ ಕರ್ಕೇರ, ಸದಾನಂದ ಬಳ್ಕೂರು, ವನಜ ಹೆಚ್ ಕಿದಿಯೂರು, ವನಜ ಜೆ ಪುತ್ರನ್, ಮನೋಜ್ ಆಯ್ಕೆಯಾಗಿದ್ದಾರೆ.

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳ ಮೂಲಕ ವ್ಯವಹಾರ ನಡೆಸುತ್ತಿದ್ದು, 2022-23 ನೇ ಸಾಲಿನಲ್ಲಿ ಬ್ಯಾಂಕ್ 9,464 ಕೋಟಿ ವಾರ್ಷಿಕ ವಹಿವಾಟು ನಡೆಸಿದ್ದು, ಕಳೆದ 14 ವರ್ಷಗಳಿಂದ ನಿರಂತರವಾಗಿ ಸದಸ್ಯರಿಗೆ ಶೇಕಡಾ 18% ಡಿವಿಡೆಂಡ್ ನೀಡುವ ಕರಾವಳಿ ಕರ್ನಾಟಕದ ಏಕೈಕ ಪಟ್ಟಣ ಸಹಕಾರ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

2008 ರಿಂದ ಬ್ಯಾಂಕಿನ ನಿರ್ದೇಶಕರಾಗಿ ನಿರಂತರವಾಗಿ ಸೇವೆ ಸಲ್ಲಿಸಿರುವ ಯಶ್ ಪಾಲ್ ಸುವರ್ಣ 2018 ರಲ್ಲಿ ಬ್ಯಾಂಕಿನ ಅಧ್ಯಕ್ಷರಾಗಿ ಸಂಸ್ಥೆಯ ಸಾರಥ್ಯ ವಹಿಸಿ ಬ್ಯಾಂಕ್ ಸರ್ವಾಂಗೀಣ ಪ್ರಗತಿ ಸಾಧಿಸುವಲ್ಲಿ ಪ್ರಮುಖ ಪಾತ್ರವಹಿಸಿ ಇದೀಗ ಮತ್ತೊಮ್ಮೆ ಬ್ಯಾಂಕಿನ ಅಧ್ಯಕ್ಷರಾಗಿ ಸಂಸ್ಥೆಯನ್ನು ಮುನ್ನಡೆಸಲಿದ್ದಾರೆ.

2014 ರಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾಗಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ, ಹಲವಾರು ಸಹಕಾರಿ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಯಶ್ ಪಾಲ್ ಸುವರ್ಣ ತಮ್ಮ ಸಹಕಾರ ಕ್ಷೇತ್ರದ ಸಾಧನೆಗಾಗಿ 69ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ 2022 ನೇ ಸಾಲಿನ ಸಹಕಾರ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಸಹಕಾರ ರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ, ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಮೀನುಗಾರಿಕೆ ಕ್ಷೇತ್ರದಲ್ಲಿ ತಮ್ಮ ಕಾರ್ಯವೈಖರಿಯಿಂದ ಗುರುತಿಸಿಕೊಂಡಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago