Union Budget 2021 : ಎಲ್ಲ ಜಿಲ್ಲೆಗಳಲ್ಲಿ ಉನ್ನತ ಮಟ್ಟದ ಲ್ಯಾಬ್ ಗಳ ಸ್ಥಾಪನೆ , ಮೂಲಸೌಕರ್ಯ ವಲಯಕ್ಕೆ ಹೆಚ್ಚು ಹಣ ನೀಡಲು ನಿರ್ಧಾರ : ನಿರ್ಮಲ ಸೀತಾರಾಮನ್ -Vishwanews24

Featured, ರಾಷ್ಟ್ರ ನ್ಯೂಸ್

Union Budget 2021 : ಎಲ್ಲ ಜಿಲ್ಲೆಗಳಲ್ಲಿ ಉನ್ನತ ಮಟ್ಟದ ಲ್ಯಾಬ್ ಗಳ ಸ್ಥಾಪನೆ , ಮೂಲಸೌಕರ್ಯ ವಲಯಕ್ಕೆ ಹೆಚ್ಚು ಹಣ ನೀಡಲು ನಿರ್ಧಾರ : ನಿರ್ಮಲ ಸೀತಾರಾಮನ್ -Vishwanews24

ನವದೆಹಲಿ: ಕರೋನದ ದಿಂದ ಕಂಗೆಟ್ಟಿರುವ ದೇಶದ ಅರ್ಥಿಕ ಪರಿಸ್ಥಿತಿಯ ನಡುವೆ ಇಂದು 2021-22ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್‌ ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್‌ ಅವರು ಮಂಡನೆ ಮಾಡುತ್ತಿದ್ದಾರೆ.

ಈ ನಡುವೆ ಅವರು ಬಜೆಟ್ ಮಂಡನೆ ವೇಳೇಯಲ್ಲಿ , ಕೊರೊನಾ ಮಹಾಮಾರಿ ನಡುವೆ ಬಜೆಟ್ ಮಂಡನೆ ತಯಾರಿ ನಡೆದಿದೆ. ನಮ್ಮ ದೇಶದಲ್ಲಿ ಹಲವರು ಮನೆ ಕಳೆದುಕೊಂಡಿದ್ದಾರೆ. ಲಾಕ್ ಡೌನ್ ಬಳಿಕ ಗರೀಬ್ ಕಲ್ಯಾಣ್ ಯೋಜನೆ ಘೋಷಣೆ ಮಾಡಲಾಗಿದೆ. ದೇಶ ಸಂಕಷ್ಟದಲ್ಲಿದ್ದಾಗ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ.

ಭಾರತದಲ್ಲಿ ಕೊರೊನಾಗೆ ಈಗಾಗಲೇ ಎರಡು ಲಸಿಕೆಗಳು ಬಳಕೆಯಲ್ಲಿದ್ದು, ಮತ್ತೆರಡು ಲಸಿಕೆಗಳು ಶೀಘ್ರವೇ ಲಭ್ಯವಾಗಲಿದೆ. ಕೊರನಾ ನಂತರ ಜಗತ್ತು 2 ಮಹಾಯುದ್ಧದ ಪರಿಸ್ಥಿತಿ ಎದುರಿಸುತ್ತಿದೆ. ಕೇಂದ್ರ ಸರ್ಕಾರ ಬಡವರು, ದಲಿತರು, ಬುಡಕಟ್ಟು ಸಮುದಾಯಕ್ಕೆ ನೆರವಾಗಿದೆ ಎಂದರು.

ಐದು ಆಧಾರ ಸ್ತಂಬಳ ಮೇಲೆ ಬಜೆಟ್ ಮಂಡನೆಯಾಗಲಿದೆ. 17 ಸಾವಿರ ಗ್ರಾಮೀಣಾ ವೆನಲ್ ನೆಸ್ ಸೆಂಟರ್ ಗಳಿಗೆ ಬೆಂಬಲ, ಆರೋಗ್ಯ ಕ್ಷೇತ್ರ ಮೂಲ ಸೌಲಭ್ಯಕ್ಕೆ 64,180 ಕೋಟಿ ರೂ. ಘೋಷಿಸಲಾಗಿದೆ. ಎಲ್ಲ ಜಿಲ್ಲೆಗಳಲ್ಲಿ ಉನ್ನತ ಮಟ್ಟದ ಲ್ಯಾಬ್ ಗಳ ಸ್ಥಾಪನೆ 112 ಜಿಲ್ಲೆಗಳಲ್ಲಿ ಪೌಷ್ಠಿಕ ವೃದ್ಧಿಗೆ ಆಧ್ಯತೆ. ಜನರಿಗೆ ಶುದ್ದಧ ಕುಡಿಯುವ ನೀರು ಪೂರೈಕೆ ಮಾಡಲಾಗುವುದು.

ಮೂಲಸೌಕರ್ಯ ವಲಯಕ್ಕೆ ಹೆಚ್ಚು ಹಣ ನೀಡಲು ನಿರ್ಧಾರ ಮಾಡಲಾಗಿದೆ. ಮುಂದಿನ 3 ವರ್ಷಗಳಲ್ಲಿ 5 ಲಕ್ಷ ಕೋಟಿ ನೆರವು ನೀಡಲು ನಿರ್ಧರಿಸಲಾಗಿದೆ