ನವದೆಹಲಿ: ಕರೋನದ ದಿಂದ ಕಂಗೆಟ್ಟಿರುವ ದೇಶದ ಅರ್ಥಿಕ ಪರಿಸ್ಥಿತಿಯ ನಡುವೆ ಇಂದು 2021-22ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು ಮಂಡನೆ ಮಾಡುತ್ತಿದ್ದಾರೆ.
ಈ ನಡುವೆ ಅವರು ಬಜೆಟ್ ಮಂಡನೆ ವೇಳೇಯಲ್ಲಿ , ಕೊರೊನಾ ಮಹಾಮಾರಿ ನಡುವೆ ಬಜೆಟ್ ಮಂಡನೆ ತಯಾರಿ ನಡೆದಿದೆ. ನಮ್ಮ ದೇಶದಲ್ಲಿ ಹಲವರು ಮನೆ ಕಳೆದುಕೊಂಡಿದ್ದಾರೆ. ಲಾಕ್ ಡೌನ್ ಬಳಿಕ ಗರೀಬ್ ಕಲ್ಯಾಣ್ ಯೋಜನೆ ಘೋಷಣೆ ಮಾಡಲಾಗಿದೆ. ದೇಶ ಸಂಕಷ್ಟದಲ್ಲಿದ್ದಾಗ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ.
ಭಾರತದಲ್ಲಿ ಕೊರೊನಾಗೆ ಈಗಾಗಲೇ ಎರಡು ಲಸಿಕೆಗಳು ಬಳಕೆಯಲ್ಲಿದ್ದು, ಮತ್ತೆರಡು ಲಸಿಕೆಗಳು ಶೀಘ್ರವೇ ಲಭ್ಯವಾಗಲಿದೆ. ಕೊರನಾ ನಂತರ ಜಗತ್ತು 2 ಮಹಾಯುದ್ಧದ ಪರಿಸ್ಥಿತಿ ಎದುರಿಸುತ್ತಿದೆ. ಕೇಂದ್ರ ಸರ್ಕಾರ ಬಡವರು, ದಲಿತರು, ಬುಡಕಟ್ಟು ಸಮುದಾಯಕ್ಕೆ ನೆರವಾಗಿದೆ ಎಂದರು.
ಐದು ಆಧಾರ ಸ್ತಂಬಳ ಮೇಲೆ ಬಜೆಟ್ ಮಂಡನೆಯಾಗಲಿದೆ. 17 ಸಾವಿರ ಗ್ರಾಮೀಣಾ ವೆನಲ್ ನೆಸ್ ಸೆಂಟರ್ ಗಳಿಗೆ ಬೆಂಬಲ, ಆರೋಗ್ಯ ಕ್ಷೇತ್ರ ಮೂಲ ಸೌಲಭ್ಯಕ್ಕೆ 64,180 ಕೋಟಿ ರೂ. ಘೋಷಿಸಲಾಗಿದೆ. ಎಲ್ಲ ಜಿಲ್ಲೆಗಳಲ್ಲಿ ಉನ್ನತ ಮಟ್ಟದ ಲ್ಯಾಬ್ ಗಳ ಸ್ಥಾಪನೆ 112 ಜಿಲ್ಲೆಗಳಲ್ಲಿ ಪೌಷ್ಠಿಕ ವೃದ್ಧಿಗೆ ಆಧ್ಯತೆ. ಜನರಿಗೆ ಶುದ್ದಧ ಕುಡಿಯುವ ನೀರು ಪೂರೈಕೆ ಮಾಡಲಾಗುವುದು.
ಮೂಲಸೌಕರ್ಯ ವಲಯಕ್ಕೆ ಹೆಚ್ಚು ಹಣ ನೀಡಲು ನಿರ್ಧಾರ ಮಾಡಲಾಗಿದೆ. ಮುಂದಿನ 3 ವರ್ಷಗಳಲ್ಲಿ 5 ಲಕ್ಷ ಕೋಟಿ ನೆರವು ನೀಡಲು ನಿರ್ಧರಿಸಲಾಗಿದೆ
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…