ನವದೆಹಲಿ : ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಮೇಲ್ದರ್ಜೆಗೆ ಏರಿಸಲಾಗುವುದು ಅಂತ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು.
ಬಜೆಟ್ ಮಂಡನೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿಯನ್ನು ತಿಳಿಸುತ್ತ ಭಾರತವು ಈ ಆರ್ಥಿಕ ವರ್ಷದಲ್ಲಿ 9.2% ಬೆಳವಣಿಗೆಯನ್ನು ನಿರೀಕ್ಷಿಸುತ್ತಿದೆ ಅಂಥ ಹೇಳಿದರು. ಸರ್ಕಾರವು ನಾಗರಿಕ-ಕೇಂದ್ರಿತ ಸುಧಾರಣೆಗಳ ಮೇಲೆ ಕೇಂದ್ರೀಕರಿಸಿದೆ ಮತ್ತು ಮುಂದಿನ 25 ವರ್ಷಗಳಲ್ಲಿ ಆರ್ಥಿಕತೆಯನ್ನು ಸುಧಾರಿಸುವ ಗುರಿಯನ್ನು ಈ ಬಜೆಟ್ ಹೊಂದಿದೆ ಅಂಥ ಹೇಳಿದರು. ನಾವು ಓಮಿಕ್ರಾನ್ ಅಲೆಯ ಮಧ್ಯೆ ಇದ್ದೇವೆ, ನಮ್ಮ ವ್ಯಾಕ್ಸಿನೇಷನ್ ಅಭಿಯಾನದ ವೇಗವು ಹೆಚ್ಚು ಸಹಾಯ ಮಾಡಿದೆ. ‘ಸಬ್ಕಾ ಪ್ರಯಾಸ್’, ನಾವು ಬಲವಾದ ಬೆಳವಣಿಗೆಯೊಂದಿಗೆ ಮುಂದುವರಿಯುತ್ತೇವೆ ಎಂದು ನನಗೆ ವಿಶ್ವಾಸವಿದೆ, 2021-22ರ ಬಜೆಟ್ನಲ್ಲಿ ಸಾರ್ವಜನಿಕ ಹೂಡಿಕೆ ಮತ್ತು ಬಂಡವಾಳ ವೆಚ್ಚದಲ್ಲಿ ತೀವ್ರ ಏರಿಕೆ ಕಂಡುಬಂದಿದೆ…ಈ ಬಜೆಟ್ (2022-23) ಯುವಕರು, ಮಹಿಳೆಯರು, ರೈತರು, ಎಸ್ಸಿ, ಎಸ್ಟಿ ವರ್ಗಕ್ಕೆ ಸಹಾಯವಾಗಲಿದೆ, ಪ್ರಧಾನಮಂತ್ರಿ ಗತಿ ಶಕ್ತಿ ಮಾಸ್ಟರ್ ಪ್ಲಾನ್ ಮಾರ್ಗದರ್ಶನ ನೀಡಲಿದೆ ಅಂಥ ಹೇಳಿದರು.
2021-22 ರ ರಾಬಿ ಋತುವಿನಲ್ಲಿ ಗೋಧಿ ಸಂಗ್ರಹಣೆ ಮತ್ತು 2021-22 ರ ಖಾರಿಫ್ ಋತುವಿನಲ್ಲಿ ಭತ್ತದ ಅಂದಾಜು ಸಂಗ್ರಹಣೆಯು 163 ಲಕ್ಷ ರೈತರಿಂದ 1208 ಲಕ್ಷ ಮೆಟ್ರಿಕ್ ಟನ್ ಗೋಧಿ ಮತ್ತು ಭತ್ತವನ್ನು ನೀಡುತ್ತದೆ ಮತ್ತು ರೂ 2.37 ಲಕ್ಷ ಕೋಟಿಗಳು ಅವರ MSP ಮೌಲ್ಯದ ನೇರ ಪಾವತಿಯಾಗಿದೆ. ಇದೇ ವೇಳೆ ಅವರು ಮಾತನಾಡಿ, ದೇಶಾದ್ಯಂತ ಡಿಜಿಟಲ್ ಯುನಿವರ್ಸಿಟಿ ಆರಂಭ ಮಾಡಲಾಗುವುದು ಅಂತ ತಿಳಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…