Featured

UNION BUDGET 2022 :ರಾಜ್ಯ ಸರ್ಕಾರಗಳಿಗೆ 50 ವರ್ಷಗಳ ಕಾಲ ಬಡ್ಡಿ ರಹಿತ ಸಾಲ – Vishwanews24

UNION BUDGET 2022 :ರಾಜ್ಯ ಸರ್ಕಾರಗಳಿಗೆ 50 ವರ್ಷಗಳ ಕಾಲ ಬಡ್ಡಿ ರಹಿತ ಸಾಲ ..

ಸಹಕಾರಿ ಸಂಘಗಳಿಗೆ ಗುಡ್ ನ್ಯೂಸ್: ಸರ್ಚ್ ಚಾರ್ಜ್ ಶೇ.12 ರಿಂದ 7ಕ್ಕೆ ಇಳಿಕೆ..

ಬಡವರಿಗೆ 1 ವರ್ಷದಲ್ಲಿ 80 ಲಕ್ಷ ಮನೆಗಳನ್ನು ನಿರ್ಮಿಸಲಾಗುವುದು..

ITR ಸಂಬಂಧಿತ ತಪ್ಪುಗಳನ್ನು ಸರಿ ಪಡಿಸಲು 2 ವರ್ಷ ಕಾಲಾವಕಾಶ..

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತ. ರಾಜ್ಯ ಸರ್ಕಾರಗಳಿಗೆ 50 ವರ್ಷಗಳ ಕಾಲ ಬಡ್ಡಿ ರಹಿತ ಸಾಲ ನೀಡಲಾಗುವುದು ಎಂದು ತಿಳಿಸಿದರು.ಸಹಕಾರಿ ಸಂಘಗಳ ಸರ್ಜ್ ಚಾರ್ಜ್ ಅನ್ನು ಇಳಿಕೆ ಮಾಡಲಾಗುತ್ತಿದೆ.

ಶೇ.18ರಿಂದ ಶೇ.15ಕ್ಕೆ ಸರ್ಜ್ ಕೋ ಆಪರೇಟಿವ್ ಸೊಸೈಟ್ ಸರ್ಜ್ ಚಾರ್ಜ್ ಇಳಿಕೆ ಮಾಡಲಾಗುತ್ತಿದೆ. ಶೇ.12 ರಿಂದ 7ಕ್ಕೆ 1 ಕೋಟಿಯಿಂದ 2 ಕೋಟಿಯವರೆಗೆ ಸರ್ಜ್ ಚಾರ್ಜ್ ಇಳಿಕೆ ಮಾಡಲಾಗುತ್ತಿದೆ ಎಂದರು.

ಇನ್ನೂ 2022ರಿಂದಲೇ ಡಿಜಿಟಲ್ ಕರೆನ್ಸಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಮೂಲಕ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂಬುದಾಗಿ ಘೋಷಣೆ ಮಾಡಿದರು.

ಈ ಬಜೆಟ್ ನಲ್ಲಿ ಅಭಿವೃದ್ಧಿಗೆ ಉತ್ತೇಜನ ನೀಡಲಾಗಿದೆ.ಇದರ ಅಡಿಯಲ್ಲಿ ಒಂದು ವರ್ಷದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ದೇಶಾದ್ಯಂತ 80 ಲಕ್ಷ ಮನೆಗಳನ್ನು ನಿರ್ಮಿಸಲಾಗುವುದು.

ಇದನ್ನೂ ಓದಿ :

2022-23ನೇ ಹಣಕಾಸು ವರ್ಷದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ 48 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಡಲಾಗುವುದು ಎಂದು ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವರು ಹೇಳಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಈ ಯೋಜನೆಯನ್ನು ಜನರ ಬಳಿಗೆ ಕೊಂಡೊಯ್ಯಲು ಶ್ರಮಿಸಲಿವೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಹಂಚಿಕೆ ಮೊತ್ತವನ್ನು ಹೆಚ್ಚಿಸಲಾಗಿದೆ ಎಂದು ಹಣಕಾಸು ಸಚಿವರು ಹೇಳಿದರು. ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಕೇಂದ್ರ ಸರ್ಕಾರ 48000 ಕೋಟಿ ರೂ. 2022-23ರಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 80 ಲಕ್ಷ ಮನೆಗಳನ್ನು ನಿರ್ಮಿಸಲಾಗುವುದು ಮತ್ತು ಈ ಯೋಜನೆಯಡಿ 48000 ಕೋಟಿ ರೂ. ಪ್ರಧಾನ ಮಂತ್ರಿ ಆವಾಸ್ ಯೋಜನೆಯು ಸರ್ಕಾರಿ ಯೋಜನೆಯಾಗಿದ್ದು, ಇದರ ಅಡಿಯಲ್ಲಿ ದುರ್ಬಲ ಆದಾಯದ ಗುಂಪಿನ ಎಲ್ಲಾ ಜನರು ಅಥವಾ ಕುಟುಂಬಗಳಿಗೆ ಪಕ್ಕಾ ಮನೆಗಳನ್ನು ಒದಗಿಸಬೇಕು. ಇದಕ್ಕಾಗಿ ವಿವಿಧ ಅರ್ಹತಾ ಷರತ್ತುಗಳಿವೆ, ಅದರ ಅಡಿಯಲ್ಲಿ ಪ್ರಯೋಜನವನ್ನು ನೀಡಲಾಗುತ್ತದೆ. ನಗರ ಮತ್ತು ಗ್ರಾಮಾಂತರಕ್ಕೆ ಈ ಯೋಜನೆ ಜಾರಿಗೊಳಿಸಲಾಗಿದೆ. ಕಳೆದ ವರ್ಷ, ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮಿನ್ ಪ್ರಯೋಜನವು ಮಾರ್ಚ್ 2024 ರವರೆಗೆ ಲಭ್ಯವಿರುತ್ತದೆ ಎಂದು ಸರ್ಕಾರ ಘೋಷಿಸಿತು.

ಇದನ್ನೂ ಓದಿ :

ಕೇಂದ್ರ ಸರ್ಕಾರದಿಂದ ತೆರಿಗೆ ಪಾವತಿ ವಿಧಾನದಲ್ಲಿ ಹೊಸ ನೀತಿಯನ್ನು ಜಾರಿಗೊಳಿಸುತ್ತಿದೆ. ಈ ನೀತಿಯಂತೆ ತೆರಿಗೆ ಪಾವತಿದಾರರು ಆದಾಯ ತೆರಿಗೆ ಪಾವತಿ ಸಂದರ್ಭದಲ್ಲಿ ಮಾಡಿದಂತ ತಪ್ಪುಗಳನ್ನು ತಿದ್ದುಪಡಿ ಮಾಡೋದಕ್ಕೆ 2 ವರ್ಷಗಳ ಕಾಲಾವಕಾಶವನ್ನು ನೀಡಲಾಗಿದೆ.

ಈ ಕುರಿತಂತೆ ಇಂದು ಸಂಸತ್ ನಲ್ಲಿ ಕೇಂದ್ರ ಬಜೆಟ್ ಮಂಡಿಸಿ ಮಾಹಿತಿ ನೀಡಿದಂತ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಬಂಧಿತ ಮೌಲ್ಯಮಾಪನ ವರ್ಷದ 2 ವರ್ಷಗಳಲ್ಲಿ ನವೀಕರಿಸಿದ ಆದಾಯ ತೆರಿಗೆ ರಿಟರ್ನ್ (ಐಟಿಆರ್) ಸಲ್ಲಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಹೊಸ ನಿಬಂಧನೆಯನ್ನು ಘೋಷಿಸಿದ್ದಾರೆ.

ಇದನ್ನೂ ಓದಿ :

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

22 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

22 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

22 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

23 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

23 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 days ago