ಕ್ರಿಕೆಟ್ ಆಡುವಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕನೋರ್ವ ಮೃತಪಟ್ಟಿರುವ ದಾರುಣ ಘಟನೆ ಪುಣೆಯಲ್ಲಿ ನಡೆದಿದೆ. ಸ್ನೇಹಿತರೊಂದಿಗೆ ಕ್ರಿಕೆಟ್ ಆಡಲು ಹೋಗಿದ್ದ 11 ವರ್ಷದ ಶೌರ್ಯ ಮೃತಪಟ್ಟ ದುರ್ದೈವಿ. ಪುಣೆಯ ಲೋಹಗಾಂವ್ನಲ್ಲಿರುವ ಜಗದ್ಗುರು ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ಗುರುವಾರ ರಾತ್ರಿ ಸ್ನೇಹಿತರೊಂದಿಗೆ ಶೌರ್ಯ ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಬ್ಯಾಟ್ಸ್ಮನ್ ಬಾರಿಸಿದ ಚೆಂಡು ನೇರವಾಗಿ ಬೌಲಿಂಗ್ ಮಾಡುತ್ತಿದ್ದ ಶೌರ್ಯ ಅವರ ಖಾಸಗಿ ಭಾಗಕ್ಕೆ ಬಲವಾಗಿ ಬಡಿದಿದೆ.
ಚೆಂಡು ಬಡಿದ ರಭಸದಿಂದ ನಿತ್ರಾಣಗೊಂಡಿದ್ದ ಬಾಲಕ ಹೆಜ್ಜೆಯಿಡುತ್ತಲೇ ಕುಸಿದು ಬಿದ್ದಿದ್ದಾನೆ. ಈ ವೇಳೆ ಸ್ನೇಹಿತರು ಉಪಚರಿಸಿ ಎಚ್ಚರಿಸಲು ಪ್ರಯತ್ನಿಸಿದ್ದಾರೆ. ಆದರೆ ಶೌರ್ಯ ಕಡೆಯಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿರಲಿಲ್ಲ.
ಹೀಗಾಗಿ ಇತರರ ನೆರವಿನೊಂದಿಗೆ ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ದುರದೃಷ್ಟವಶಾತ್ ಅದಾಗಲೇ ತುಂಬಾ ತಡವಾಗಿತ್ತು. ಶೌರ್ಯ ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಲಾಗಿದ್ದು, ದೂರಿನಲ್ಲಿ ಹಠಾತ್ ಸಾವು ಎಂದು ತಿಳಿಸಲಾಗಿದೆ. ಅಲ್ಲದೆ ಮರಣೋತ್ತರ ಪರೀಕ್ಷೆಯ ಮೃತದೇಹವನ್ನು ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…