ಕ್ರಿಕೆಟ್ ಆಡುವಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕನೋರ್ವ ಮೃತಪಟ್ಟಿರುವ ದಾರುಣ ಘಟನೆ ಪುಣೆಯಲ್ಲಿ ನಡೆದಿದೆ. ಸ್ನೇಹಿತರೊಂದಿಗೆ ಕ್ರಿಕೆಟ್ ಆಡಲು ಹೋಗಿದ್ದ 11 ವರ್ಷದ ಶೌರ್ಯ ಮೃತಪಟ್ಟ ದುರ್ದೈವಿ. ಪುಣೆಯ ಲೋಹಗಾಂವ್ನಲ್ಲಿರುವ ಜಗದ್ಗುರು ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ಗುರುವಾರ ರಾತ್ರಿ ಸ್ನೇಹಿತರೊಂದಿಗೆ ಶೌರ್ಯ ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಬ್ಯಾಟ್ಸ್ಮನ್ ಬಾರಿಸಿದ ಚೆಂಡು ನೇರವಾಗಿ ಬೌಲಿಂಗ್ ಮಾಡುತ್ತಿದ್ದ ಶೌರ್ಯ ಅವರ ಖಾಸಗಿ ಭಾಗಕ್ಕೆ ಬಲವಾಗಿ ಬಡಿದಿದೆ.
ಚೆಂಡು ಬಡಿದ ರಭಸದಿಂದ ನಿತ್ರಾಣಗೊಂಡಿದ್ದ ಬಾಲಕ ಹೆಜ್ಜೆಯಿಡುತ್ತಲೇ ಕುಸಿದು ಬಿದ್ದಿದ್ದಾನೆ. ಈ ವೇಳೆ ಸ್ನೇಹಿತರು ಉಪಚರಿಸಿ ಎಚ್ಚರಿಸಲು ಪ್ರಯತ್ನಿಸಿದ್ದಾರೆ. ಆದರೆ ಶೌರ್ಯ ಕಡೆಯಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿರಲಿಲ್ಲ.
ಹೀಗಾಗಿ ಇತರರ ನೆರವಿನೊಂದಿಗೆ ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ದುರದೃಷ್ಟವಶಾತ್ ಅದಾಗಲೇ ತುಂಬಾ ತಡವಾಗಿತ್ತು. ಶೌರ್ಯ ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಲಾಗಿದ್ದು, ದೂರಿನಲ್ಲಿ ಹಠಾತ್ ಸಾವು ಎಂದು ತಿಳಿಸಲಾಗಿದೆ. ಅಲ್ಲದೆ ಮರಣೋತ್ತರ ಪರೀಕ್ಷೆಯ ಮೃತದೇಹವನ್ನು ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…