ಅಯೋಧ್ಯೆಯಲ್ಲಿ ರಾಮಮಂದಿರ ಕಾಮಗಾರಿ ವೀಕ್ಷಿಸಿದ ಪೇಜಾವರಶ್ರೀ–
ಉಡುಪಿ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವಿಶ್ವಸ್ಥರಾದ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮನಗರಿಗೆ ಭೇಟಿ ನೀಡಿ ಮಂದಿರ ನಿರ್ಮಾಣ ಕಾಮಗಾರಿ ವೀಕ್ಷಿಸಿದರು.ರಾಮಲಲ್ಲಾನ ತಾತ್ಕಾಲಿಕ ಗುಡಿಗೆ ತೆರಳಿದ ಪೇಜಾವರ ಶ್ರೀಗಳು ದರ್ಶನ ಪಡೆದರು. ದೇವರಿಗೆ ಪುಷ್ಪಾರ್ಚನೆ ಮತ್ತು ಚಾಮರ ಸೇವೆ ಮಾಡಿದರು. ಕೆಲಕಾಲ ಗುಡಿ ಮುಂದೆ ಕುಳಿತು ಜಪಗೈದರು. ಬಳಿಕ ಅಲ್ಲಿಂದ ಮಂದಿರ ನಿರ್ಮಾಣ ಮಾಡುವ ಬುನಾದಿ ತುಂಬಿಸುವ ಸ್ಥಳಕ್ಕೆ ತೆರಳಿದರುಅಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಅಡಿಪಾಯ ತುಂಬಿಸುವ ಕಾಮಗಾರಿ ಆರಂಭವಾದ ನಂತರ ಇದು ಅವರ ಮೊದಲ ಭೇಟಿಯಾಗಿದೆ. ಅಲ್ಲಿ ನಡೆಯುತ್ತಿರುವ ಕಾಮಗಾರಿ ವೀಕ್ಷಿಸಿ, ಈವರೆಗೆ ನಡೆದ ಕಾಮಗಾರಿಯ ಪ್ರಗತಿಯನ್ನು ಎಂಜಿನಿಯರ್ ಗಳು ಸ್ವಾಮೀಜಿಗೆ ವಿವರಿಸಿದರು. ತಳಹದಿ ಕಾಮಗಾರಿ, ಅದರ ಸಾಮರ್ಥ್ಯದ ಬಗ್ಗೆ ವಿವರಣೆ ನೀಡಿದರು.ಈ ವೇಳೆ ಟ್ರಸ್ಟ್ ನ ವಿಶ್ವಸ್ಥ ಡಾ. ಅನಿಲ್ ಮಿಶ್ರಾ, ಮಂದಿರ ನಿರ್ಮಾಣ ಉಸ್ತುವಾರಿ ತಂಡದ ಗೋಪಾಲ ನಾಗರಕಟ್ಟೆ, ಮಂದಿರ ನಿರ್ಮಾಣ ಸಂಸ್ಥೆ ಎಲ್ಆಯಂಡ್ಟಿ ಮತ್ತು ಮೇಲುಸ್ತುವಾರಿ ಸಂಸ್ಥೆ ಟಾಟಾ ಕನ್ಸಲ್ಟನ್ಸಿಯ ಎಂಜಿನಿಯರ್ ಗಳಿಂದಲೂ ಮಾಹಿತಿ ಪಡೆದರು. ಪೇಜಾವರ ಮಠದ ಆಪ್ತ ಕಾರ್ಯದರ್ಶಿ ವಿಷ್ಣು ಮತ್ತು ಕೃಷ್ಣ ಜೊತೆಗಿದ್ದರು.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…