ಅಯೋಧ್ಯೆಯಲ್ಲಿ ರಾಮಮಂದಿರ ಕಾಮಗಾರಿ ವೀಕ್ಷಿಸಿದ ಪೇಜಾವರಶ್ರೀ–
ಉಡುಪಿ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವಿಶ್ವಸ್ಥರಾದ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮನಗರಿಗೆ ಭೇಟಿ ನೀಡಿ ಮಂದಿರ ನಿರ್ಮಾಣ ಕಾಮಗಾರಿ ವೀಕ್ಷಿಸಿದರು.ರಾಮಲಲ್ಲಾನ ತಾತ್ಕಾಲಿಕ ಗುಡಿಗೆ ತೆರಳಿದ ಪೇಜಾವರ ಶ್ರೀಗಳು ದರ್ಶನ ಪಡೆದರು. ದೇವರಿಗೆ ಪುಷ್ಪಾರ್ಚನೆ ಮತ್ತು ಚಾಮರ ಸೇವೆ ಮಾಡಿದರು. ಕೆಲಕಾಲ ಗುಡಿ ಮುಂದೆ ಕುಳಿತು ಜಪಗೈದರು. ಬಳಿಕ ಅಲ್ಲಿಂದ ಮಂದಿರ ನಿರ್ಮಾಣ ಮಾಡುವ ಬುನಾದಿ ತುಂಬಿಸುವ ಸ್ಥಳಕ್ಕೆ ತೆರಳಿದರುಅಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಅಡಿಪಾಯ ತುಂಬಿಸುವ ಕಾಮಗಾರಿ ಆರಂಭವಾದ ನಂತರ ಇದು ಅವರ ಮೊದಲ ಭೇಟಿಯಾಗಿದೆ. ಅಲ್ಲಿ ನಡೆಯುತ್ತಿರುವ ಕಾಮಗಾರಿ ವೀಕ್ಷಿಸಿ, ಈವರೆಗೆ ನಡೆದ ಕಾಮಗಾರಿಯ ಪ್ರಗತಿಯನ್ನು ಎಂಜಿನಿಯರ್ ಗಳು ಸ್ವಾಮೀಜಿಗೆ ವಿವರಿಸಿದರು. ತಳಹದಿ ಕಾಮಗಾರಿ, ಅದರ ಸಾಮರ್ಥ್ಯದ ಬಗ್ಗೆ ವಿವರಣೆ ನೀಡಿದರು.ಈ ವೇಳೆ ಟ್ರಸ್ಟ್ ನ ವಿಶ್ವಸ್ಥ ಡಾ. ಅನಿಲ್ ಮಿಶ್ರಾ, ಮಂದಿರ ನಿರ್ಮಾಣ ಉಸ್ತುವಾರಿ ತಂಡದ ಗೋಪಾಲ ನಾಗರಕಟ್ಟೆ, ಮಂದಿರ ನಿರ್ಮಾಣ ಸಂಸ್ಥೆ ಎಲ್ಆಯಂಡ್ಟಿ ಮತ್ತು ಮೇಲುಸ್ತುವಾರಿ ಸಂಸ್ಥೆ ಟಾಟಾ ಕನ್ಸಲ್ಟನ್ಸಿಯ ಎಂಜಿನಿಯರ್ ಗಳಿಂದಲೂ ಮಾಹಿತಿ ಪಡೆದರು. ಪೇಜಾವರ ಮಠದ ಆಪ್ತ ಕಾರ್ಯದರ್ಶಿ ವಿಷ್ಣು ಮತ್ತು ಕೃಷ್ಣ ಜೊತೆಗಿದ್ದರು.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…