ಅಖಂಡ ಕರ್ನಾಟಕ ಬಂದ್ : ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ – Vishwanews24
ಅಖಂಡ ಕರ್ನಾಟಕ ಬಂದ್ : ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ
ಬೆಂಗಳೂರು : ಬೆಂಗಳೂರಿನ ಟೌನ್ ಹಾಲ್ ಬಳಿ ಪ್ರತಿಭಟನೆ ನಡೆಸಲು ಮುಂದಾಗುತ್ತಿದ್ದ ಹಿರಿಯ ಹೋರಾಟಗಾರ, ವಾಟಾಳ್ ನಾಗರಾಜ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ವಾಟಾಳ್ ನಾಗರಾಜ್ ಅವರನ್ನು ವಶಕ್ಕೆ ಪಡೆದ ಪೊಲೀಸರು ಬಿಎಂಟಿಸಿ ವಾಹನದಲ್ಲಿ ಫ್ರೀಡಂ ಪಾರ್ಕ್ ಗೆ ಕರೆದೊಯ್ತಾಯಿದ್ದಾರೆ ಟೌನ್ ಹಾಲ್ ಬಳಿ ಪ್ರತಿಭಟನೆಗೆ ಮುಂದಾಗಿದ್ದ ವಾಟಾಳ್ ನಾಗರಾಜ್ ಅವರನ್ನು ಇದೀಗ ನೇರವಾಗಿ ಫ್ರೀಡಂ ಪಾರ್ಕ್ ನತ್ತ ಕರೆದುಕೊಂಡು ಹೋಗುತ್ತಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಪೊಲೀಸ್ ಸರನ್ನು ಯೋಜನೆ ಮಾಡಿ ಪ್ರತಿಭಟನೆ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಅಲ್ಲದೆ ಇದೇ ವೇಳೆ ಸಿದ್ದರಾಮೇಶ್ವರ,ಪರಮೇಶ್ವರ, ಶಿವಕುಮಾರ ದೇವರು ಹೆಸರುಗಳನ್ನು ಇಟ್ಟುಕೊಂಡು ನೀವೇ ಈ ರೀತಿ ನಡೆದುಕೊಂಡರೆ ಸಾಮಾನ್ಯ ಜನರ ಪರಿಸ್ಥಿತಿ ಹೇಗೆ ಎಂದು ಲೇವಡಿ ಮಾಡಿದರು.
