ಅಖಿಲ ಭಾರತ ಕಾಂಗ್ರೆಸ್ ನ ಯುವ ಘಟಕದ ಮಧ್ಯಂತರ ಅಧ್ಯಕ್ಷರಾಗಿ ಕರ್ನಾಟಕದ ಬಿ.ವಿ. ಶ್ರೀನಿವಾಸ್ ನೇಮಕ -Vishwanews24
ನವದೆಹಲಿ: ಅಖಿಲ್ ಭಾರತ ಕಾಂಗ್ರೆಸ್ ಯುವ ಘಟಕದ ಮಧ್ಯಂತರ ಅಧ್ಯಕ್ಷರನ್ನಾಗಿ ಕರ್ನಾಟಕದ ಮೂಲದ ಬಿ.ವಿ.ಶ್ರೀನಿವಾಸ್ ಅವರನ್ನು ನೇಮಕ ಮಾಡಲಾಗಿದೆ.
ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಕೇಶವ್ ಚಂದ್ ಆವರು 2019ರ ಲೋಕಸಭಾ ಚುನಾವಣೆ ಸೋಲಿನ ಹೊಣೆ ಹೊತ್ತು ಹುದ್ದೆ ತ್ಯಜಿಸಿದ್ದರು. ಯಾದವ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ವರ್ಷದ ಹಿಂದೆ ಯುವ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದ ಶ್ರೀನಿವಾಸ್.ಬಿ.ವಿ. ಆಯ್ಕೆಯಾಗಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು, ಬಿ.ವಿ.ಶ್ರೀನಿವಾಸ್ ಅವರನ್ನು ಅಖಿಲ್ ಭಾರತ ಯುವ ಕಾಂಗ್ರೆಸ್ ಘಟಕದ ಮಧ್ಯಂತರ ಅಧ್ಯಕ್ಷರನ್ನಾಗಿ ಎಐಸಿಸಿ ಅಧ್ಯಕ್ಷರು ನೇಮಕ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಯುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿಯಾಗಿದ್ದ ಶ್ರೀನಿವಾಸ್ ಅವರು, ಪಕ್ಷ ನೀಡಿದ ಹಲವು ಗುರುತರ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಗುಜರಾತ್, ಉತ್ತರಪ್ರದೇಶ, ತೆಲಂಗಾಣ ಉಸ್ತುವಾರಿಯನ್ನು ವಯಿಸಿದ್ದರು. ಗುಜರಾತ್ ವಿಧಾನಸಭಾ ಚುನಾವಣೆ ವೇಳೆ ರಾಹುಲ್ ಗಾಂಧಿ ಅವರ ಮೆಚ್ಚುಗೆಗೆ ಪಾತ್ರವಾಗಿದ್ದರು.
