ಅತ್ಯಧಿಕ ಮತಗಳಿಂದ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಗೆಲ್ತಾರೆಂಬ ವಿಶ್ವಾಸವಿದೆ : ಎಚ್.ಡಿ.ರೇವಣ್ಣ – Vishwanews24
ಅತ್ಯಧಿಕ ಮತಗಳಿಂದ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಗೆಲ್ತಾರೆಂಬ ವಿಶ್ವಾಸವಿದೆ : ಎಚ್.ಡಿ.ರೇವಣ್ಣ – Vishwanews24
ಹಾಸನ: ರಾಜ್ಯಕ್ಕೆ, ಜಿಲ್ಲೆಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರದ್ದೇಯಾದ ಕೊಡುಗೆ ಕೊಟ್ಟಿದ್ದಾರೆ. ಆದ್ದರಿಂದ ಸೂರಜ್ ರೇವಣ್ಣ ಗೆಲ್ತಾರೆಂಬ ವಿಶ್ವಾಸವಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆ ನೀಡಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊಳೆನರಸೀಪುರ ಪುರಸಭೆ ಮತಗಟ್ಟೆಯಲ್ಲಿ ಮತದಾನ ಮಾಡಿದ್ದೀನಿ. ಅತ್ಯಧಿಕ ಮತಗಳಿಂದ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಗೆಲ್ತಾರೆಂಬ ವಿಶ್ವಾಸವಿದೆ. ಒಳ್ಳೆಯ ಕೆಲಸ, ದೈವ ಭಕ್ತಿ, ಜಿಲ್ಲೆಯಲ್ಲಿ ದೇವೇಗೌಡರ ಆಶೀರ್ವಾದ, ಹದಿನಾಲ್ಕು ತಿಂಗಳಲ್ಲಿ ಕುಮಾರಸ್ವಾಮಿ ಮಾಡಿದ ಕೆಲಸದಿಂದ ಜೆಡಿಎಸ್ ಅಭ್ಯರ್ಥಿ ಗೆಲ್ಲುತ್ತಾರೆ.
