ಅತ್ಯಾಚಾರಿಗಳ ಮರಣದಂಡನೆ ದೇಶದ ಹೆಣ್ಣುಮಕ್ಕಳಿಗೆ ಅರ್ಪಣೆ : ನಿರ್ಭಯಾ ಪೋಷಕರು -Vishwanews24
ನವದೆಹಲಿ: 2012ರ ಡಿಸೆಂಬರ್ 16ರಂದು ದೆಹಲಿಯಲ್ಲಿ 23 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಚಲಿಸುತ್ತಿದ್ದ ಬಸ್ಸಿನಲ್ಲಿ ಭೀಕರವಾಗಿ ಅತ್ಯಾಚಾರ ಎಸಗಿ ಕ್ರೂರವಾಗಿ ಕೊಲೆ ಮಾಡಿದ್ದ ಹಂತಕರನ್ನು ಕೊನೆಗೂ ಗಲ್ಲಿಗೇರಿಸಲಾಯಿತು ಈ ಘಟನೆ ನಡೆದು ಎಂಟು ವರ್ಷಗಳ ನಡೆದಿದೆ.
8 ವರ್ಷಗಳ ದೀರ್ಘ ಹೋರಾಟದ ಬಳಿಕ ಕಾಮುಕರ ಅಟ್ಟಹಾಸಕ್ಕೆ ಬಲಿಯಾಗಿದ್ದ ‘ನಿರ್ಭಯಾ’ ಆತ್ಮಕ್ಕೆ ಕೊನೆಗೂ ಶಾಂತಿ ದೊರೆತಂತಾಗಿದೆ.ನಿರ್ಭಯಾ ಹಂತಕರನ್ನು ಗಲ್ಲಿಗೇರಿಸುತ್ತಲೇ ದುರುಳರ ಸಂಹಾರವಾಯಿತೆಂದು ದೇಶದಾದ್ಯಂತ ಸಂಭ್ರಮವನ್ನು ಆಚರಿಸಲಾಗುತ್ತಿದೆ. ಹತ್ಯಾಚಾರಿಗಳ ಮರಣದಂಡನೆ ಕೇವಲ ನಿರ್ಭಯಾ ಪೋಷಕರಿಗಷ್ಟೇ ತೃಪ್ತಿ ನೀಡಿಲ್ಲ. ಇಡೀ ದೇಶದ ಜನತೆಗೆ ಸಂತಸವನ್ನು ತಂದಿದೆ.
ಅಪರಾಧಿಗಳಾದ ಮುಖೇಶ್ ಸಿಂಗ್, ವಿನಯ್ ಶರ್ಮಾ, ಪವನ್ ಗುಪ್ತಾ ಹಾಗೂ ಅಕ್ಷಯ್ ಠಾಕೂರ್ ಈ ನಾಲ್ವರು ಅಪರಾಧಿಗಳನ್ನು ಬೆಳಿಗ್ಗೆ 5.30 ಗಂಟೆಗೆ ದೆಹಲಿಯ ತಿಹಾರ್ ಜೈಲಿನಲ್ಲಿ ನೇಣಿಗೆ ಏರಿಸಲಾಗಿದೆ.ಈ ದಿನವನ್ನು ದೇಶದ ಹೆಣ್ಣುಮಕ್ಕಳಿಗೆ ಆರ್ಪಿಸುವುದಾಗಿ ನಿರ್ಭಯಾ ತಾಯಿ ಆಶಾ ದೇವಿ ನೀಡಿದಿದ್ದಾರೆ.
