ಅಧಿಕಾರ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ : ಸಿಎಂ ಸಿದ್ದರಾಮಯ್ಯ – vishwanews24
ಅಧಿಕಾರ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ : ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ. ಎಲ್ಲರಿಗೂ ಹೈಕಮಾಂಡ್ ತೀರ್ಮಾನ ಅನ್ವಯ ಆಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಚಿವ ರಾಜಣ್ಣ, ಡಿಸಿಎಂ ಡಿಕೆಶಿ ನಡುವೆ ಮಾತಿನ ಸಮರ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಚಿವ ರಾಜಣ್ಣ ಅವರ ಅಭಿಪ್ರಾಯ ಹೇಳಿದ್ದಾರೆ. ಡಿ.ಕೆ ಶಿವಕುಮಾರ್ ಅವರ ಅಭಿಪ್ರಾಯ ಹೇಳಿದ್ದಾರೆ. ಅದರ ಬಗ್ಗೆ ನಾನು ಮಾತಾಡೋಕೆ ಹೋಗೊಲ್ಲ. ಹೈಕಮಾಂಡ್ ಅಂತಿಮವಾಗಿ ತೀರ್ಮಾನ ಮಾಡಲಿದೆ. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧ. ನನ್ನನ್ನು ಸೇರಿದಂತೆ ಎಲ್ಲರೂ ಹೈಕಮಾಂಡ್ ತೀರ್ಮಾನ ಅನ್ವಯ ಆಗುತ್ತದೆ ಅಂತ ಸ್ಪಷ್ಟಪಡಿಸಿದರು.
ಮಹಾ ಕುಂಭವು ಮೃತ್ಯು ಕುಂಭವಾಗಿ ಮಾರ್ಪಟ್ಟಿದೆ : ಮಮತಾ ಬ್ಯಾನರ್ಜಿ – vishwanews24
