ಅನಾರೋಗ್ಯ ಹಿನ್ನಲೆ : ರಾಜಕೀಯದಿಂದ ಹಿಂದೆ ಸರಿದ ಸೂಪರ್ ಸ್ಟಾರ್ ರಜನಿಕಾಂತ್ -Vishwanews24

Featured, ರಾಷ್ಟ್ರ ನ್ಯೂಸ್

ಅನಾರೋಗ್ಯ ಹಿನ್ನಲೆ : ರಾಜಕೀಯದಿಂದ ಹಿಂದೆ ಸರಿದ ಸೂಪರ್ ಸ್ಟಾರ್ ರಜನಿಕಾಂತ್ -Vishwanews24

ಚೆನ್ನೈ : ಅನಾರೋಗ್ಯದಿಂದಾಗಿ ರಾಜಕೀಯ ಪಕ್ಷ ಕಟ್ಟಲು ಆಗುತ್ತಿಲ್ಲ. ಡಿಸೆಂಬರ್ 31ರಂದು ರಾಜಕೀಯ ಪಕ್ಷವನ್ನು ಅಧಿಕೃತವಾಗಿ ಘೋಷಣೆ ಮಾಡುವುದಾಗಿ ಘೋಷಿಸಿದ್ದ ನಾನು, ಸದ್ಯಕ್ಕೆ ರಾಜಕೀಯ ಪಕ್ಷ ಘೋಷಣೆಯಿಲ್ಲ ಎನ್ನುವ ಮೂಲಕ, ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯದಿಂದ ಹಿಂದೆ ಸರಿದಿದ್ದಾರೆ.

ಈ ಕುರಿತಂತೆ ಟ್ವಿಟ್ ಮೂಲಕ ಮಾಹಿತಿ ಹಂಚಿಕೊಂಡಿರುವಂತ ಸೂಪರ್ ಸ್ಟಾರ್ ರಜನಿಕಾಂತ್ ಅವರು, ಸದ್ಯಕ್ಕೆ ರಾಜಕೀಯಕ್ಕೆ ಬರಲು ಆಗುವುದಿಲ್ಲ. ಆರೋಗ್ಯ ದೃಷ್ಠಿಯಿಂದ ಪಾರ್ಟಿ ಕಟ್ಟಲು ಆಗ್ತಿಲ್ಲ. ನಿಮ್ಮನ್ನು ನಿರಾಸೆಗೊಳಿಸಿದ್ದಕ್ಕೆ ಕ್ಷಮೆ ಇರಲಿ ಎಂದಿದ್ದಾರೆ.

ಸೂಪರ್ ಸ್ಟಾರ್ ರಜನಿಕಾಂತ್ ಕಳೆದ ನಾಲ್ಕು ದಿನಗಳ ಹಿಂದಷ್ಟೇ ಅಧಿಕ ರಕ್ತದೊತ್ತಡಕ್ಕೆ ಒಳಗಾಗಿ ಹೈದರಾಬಾದ್ ನ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಸೋಮವಾರ ಬೆಳಿಗ್ಗೆಷಟ್ಟೇ ಚಿಕಿತ್ಸೆ ಪಡೆದ ಬಳಿಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಇಂತಹ ನಟ ರಜನಿಕಾಂತ್ ಗೆ ಸದ್ಯಕ್ಕೆ ವಿಶ್ರಾಂತಿ ತೆಗೆದುಕೊಳ್ಳುವಂತೆಯೂ ವೈದ್ಯರು ಸೂಚನೆ ನೀಡಿದ್ದರು. ಈ ಎಲ್ಲಾ ಕಾರಣದಿಂದಾಗಿ ನಟ ರಜನಿಕಾಂತ್ ಡಿಸೆಂಬರ್ 31ರಂದು ತಮ್ಮ ಅಧಿಕೃತ ರಾಜಕೀಯ ಪಕ್ಷ ಘೋಷಣೆ ಮಾಡೋದನ್ನು, ರಾಜಕೀಯಕ್ಕೆ ಎಂಟ್ರಿ ಕೊಡೋದಕ್ಕೆ ಬ್ರೇಕ್ ಹಾಕಿದ್ದಾರೆ