ಅನ್ನಭಾಗ್ಯ ಯೋಜನೆಯಡಿ ನೀಡಲಾಗುತ್ತಿದ್ದ ಅಕ್ಕಿ ಪ್ರಮಾಣವನ್ನು ಕಡಿತ ಮಾಡುವ ಯಾವುದೇ ಯೋಜನೆ ನಮ್ಮ ಸರ್ಕಾರದ ಮುಂದಿಲ್ಲ : ಸಿಎಂ ಬಿಎಸ್ವೈ -Vishwanews24
ಬೆಂಗಳೂರು:ಅನ್ನಭಾಗ್ಯ ಯೋಜನೆಯಡಿ ನೀಡಲಾಗುತ್ತಿದ್ದ ಅಕ್ಕಿ ಪ್ರಮಾಣವನ್ನು ಕಡಿತ ಮಾಡುವ ಯಾವುದೇ ಯೋಜನೆ ನಮ್ಮ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಮೈತ್ರಿ ಸರ್ಕಾರದ ಜನಪ್ರಿಯ ಯೋಜನೆಗಳನ್ನು ರದ್ದು ಮಾಡಲ್ಲ ಅಂತ ಸಿಎಂ ಬಿಎಸ್ ಯಡಿಯೂರಪ್ಪನವರು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಅವರು ಮಾಧ್ಯಮ ಪ್ರಕಟಣೆಯನ್ನು ಹೊರಡಿಸಿದ್ದು, ಯೋಜನೆ ಮುಂದವರಿಯಲು ಬೇಕಾದ ಹಣ ಬಿಡುಗಡೆಗೆ ಫೈಲ್ ಸಹಿ ಮಾಡಿದ್ದೇನೆ ಅಂತ ಹೇಳಿದ್ದು, ಇನ್ನು ಯೋಜನೆಗಳ ಹಣ ಬಿಡುಗಡೆಗೆ ಸಹಿ ಮಾಡಿದ್ದೇನೆ ಅಂತ ಅವರು ಹೇಳಿದ್ದಾರೆ.
ಕಿಸಾನ್ ಸಮ್ಮಾನ್ ಯೋಜನೆಗೆ ಹಣ ಹೊಂದಿಸಲು ‘ಅನ್ನಭಾಗ್ಯ’ ಸೇರಿದಂತೆ ಹಲವು ಜನ ಕಲ್ಯಾಣ ಯೋಜನೆಗಳ ಅನುದಾನ ಕಡಿತ ಮಾಡಲು ಬಿಎಸ್ವೈ ನೇತೃತ್ವದ ಸರಕಾರ ಮುಂದಾಗಿದೆ ಎನ್ನುವ ಆರೋಪ ಕೇಳಿ ಬಂದಿತ್ತು, ಹೀಗಾಗಿ ರಾಜ್ಯ ಸರಕಾರದ ವಿರುದ್ದ ವ್ಯಾಪಕಟೀಕೆಗಳನ್ನು ಕಾಂಗ್ರೆಸ್ ಮಾಡುತ್ತ ಬಂದಿತ್ತು.
Our govt has no plans to scrap any of the pro-people schemes.
And I have already signed the file to continue the Annabhagya scheme. pic.twitter.com/keGb5no3je
— CM of Karnataka (@CMofKarnataka) August 17, 2019
ಇದಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಅನ್ನಭಾಗ್ಯ ಯೋಜನೆಯ ಏಳು ಕೆ.ಜಿ. ಅಕ್ಕಿಯಲ್ಲಿ ಕಡಿತ ಮಾಡಿದರೆ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆದಂತಾಗುತ್ತದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಈ ಪ್ರಸ್ತಾವನೆಯನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ವಿರೋಧಿಸುತ್ತದೆ. ಇದರ ವಿರುದ್ಧ ನಾವು ಬೀದಿಗಿಳಿದು ಹೋರಾಟ ಮಾಡುತ್ತೇವೆ. ಅಷ್ಟೇ ಅಲ್ಲ, ಸದನದ ಒಳಗೂ ಪ್ರತಿಭಟನೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದರು.
