ಅಪಘಾತದಲ್ಲಿ ಕಟೀಲು ದೇವಾಲಯದ ಅರ್ಚಕ ಅಸ್ರಣ್ಣ ಪುತ್ರ ಶ್ರಿನಿಧಿ ಅಸ್ರಣ್ಣ ದುರ್ಮರಣ
ಬೆಂಗಳೂರು : ಕಾರು ಮತ್ತು ಕೆ.ಎಸ್.ಆರ್.ಟಿ.ಸಿ ಡಿಕ್ಕಿ ಹೊಡೆದು ಯುವಕನೋರ್ವ ಸಾವನಪ್ಪಿದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ಜು. 24 ರ ಮಂಗಳವಾರ ರಾತ್ರಿ ಸಂಭವಿಸಿದೆ.ಮೃತ ಪಟ್ಟ ಯುವಕನನ್ನು ಶ್ರಿನಿಧಿ ಅಸ್ರಣ್ಣ ಎಂದು ಗುರುತಿಸಲಾಗಿದೆ. ಇವರು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇಗುಲದ ಅನುವಂಶಿಕ ಅರ್ಚಕ ಹರಿನಾರಯಣದಾಸ ಅಸ್ರಣ್ಣ ಅವರ ಪುತ್ರರಾಗಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
