ಅಪಘಾತದಲ್ಲಿ ಗಂಭೀರ ಗಾಯ ; ಹಿರಿಯ ನಟ ಶಿವರಾಂ  ಮಿದುಳು ನಿಷ್ಕ್ರಿಯ – Vishwanews24

Featured, ರಾಜ್ಯ ನ್ಯೂಸ್

ಅಪಘಾತದಲ್ಲಿ ಗಂಭೀರ ಗಾಯ ; ಹಿರಿಯ ನಟ ಶಿವರಾಂ  ಮಿದುಳು ನಿಷ್ಕ್ರಿಯ – Vishwanews24

ಬೆಂಗಳೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ (84) ಅವರ ಮಿದುಳು ನಿಷ್ಕ್ರಿಯಗೊಂಡಿದ್ದು, ಕೋಮಾ ಹಂತ ತಲುಪಿದ್ದಾರೆ ಎಂದು ತಿಳಿದುಬಂದಿದೆ.

ಹೊಸಕೆರೆಹಳ್ಳಿ ಬಳಿ 4 ದಿನಗಳ ಹಿಂದೆ ಕಾರಲ್ಲಿ ಹೋಗಿದ್ದ ವೇಳೆ ರಸ್ತೆ ಅಪಘಾತ ನಡೆದಿತ್ತು. ಈ ವೇಳೆ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮನೆಗೆ ಮರಳಿದ್ದರು. ಆದರೆ ಮತ್ತೆ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಹಿನ್ನಲೆಯಲ್ಲಿ ಬ್ಯಾಂಕ್​ ಕಾಲೋನಿಯಲ್ಲಿ ಇರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಕನ್ನಡ ಚಿತ್ರರಂಗಕ್ಕೆ ಶಿವರಾಂ ಅವರು ನೀಡಿದ ಕೊಡುಗೆ ಅಪಾರ. ನಟನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿಯೂ ಅವರು ಕೆಲಸ ಮಾಡಿದ್ದಾರೆ. ಹಲವಾರು ರೀತಿಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅವರು ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲಿ ಅಭಿನಯಿಸಿದ್ದಾರೆ. 6 ದಶಕಗಳಿಗೂ ಹೆಚ್ಚು ಕಾಲ ಅವರಿಗೆ ಬಣ್ಣದ ಲೋಕದಲ್ಲಿ ಅನುಭವವಿದೆ.

ಕಾಪು ಪುರಸಭೆಯ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಗುರಿ : ಕುಯಿಲಾಡಿ ಸುರೇಶ್ ನಾಯಕ್ -Vishwanews24