ಅಪಘಾತದಲ್ಲಿ ಪತ್ನಿ ಸಾವು : ನೊಂದ ಪತಿ ನೇಣಿಗೆ ಶರಣು – Vishwanews24

Featured, ರಾಷ್ಟ್ರ ನ್ಯೂಸ್

ಅಪಘಾತದಲ್ಲಿ ಪತ್ನಿ ಸಾವು – ನೊಂದ ಪತಿ ನೇಣಿಗೆ ಶರಣು

ಲಖನೌ:  ಉತ್ತರ ಪ್ರದೇಶದಲ್ಲೊಬ್ಬ ವ್ಯಕ್ತಿಯು, ಅಪಘಾತದಲ್ಲಿ ಪತ್ನಿ ತೀರಿಕೊಂಡ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಡೆತ್‌ನೋಟ್‌ ಬರೆದಿರುವ ಆತ, “ನಾವು ಇದ್ದರೂ ಜತೆಗೇ, ಸತ್ತರೂ ಜತೆಗೇ” ಎಂಬುದಾಗಿ ಬರೆದಿದ್ದಾರೆ.

ಆರು ತಿಂಗಳ ಹಿಂದೆ 36 ವರ್ಷದ ಯೋಗೇಶ್‌ ಕುಮಾರ್‌ ಹಾಗೂ 28 ವರ್ಷದ ಮಣಿಕರ್ಣಿಕಾ ಕುಮಾರಿ ಮದುವೆಯಾಗಿದ್ದರು. ಇಬ್ಬರೂ ಉತ್ತರ ಪ್ರದೇಶದ ಹರ್ದೋಯಿಯಲ್ಲಿ ನೆಲೆಸಿದ್ದರು. ಮಣಿಕರ್ಣಿಕಾ ಕುಮಾರಿ ನರ್ಸ್‌ ಆಗಿದ್ದರು. ಯೋಗೇಶ್‌ ಕುಮಾರ್‌ ಟೀಚರ್‌ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರ ದಾಂಪತ್ಯವೂ ಸುಮಧುರವಾಗಿತ್ತು. ಆದರೆ, ಕಳೆದ ಸೋಮವಾರ (ಏಪ್ರಿಲ್‌ 22) ಮಣಿಕರ್ಣಿಕಾ ಕುಮಾರಿ ಅವರು ತಡಿಯಾವಾಣ ಆರೋಗ್ಯ ಕೇಂದ್ರಕ್ಕೆ ತೆರಳುವಾಗ ಅಪರಿಚಿತ ವಾಹನವು ಮಣಿಕರ್ಣಿಕಾ ಕುಮಾರಿ ಅವರ ಸ್ಕೂಟಿಗೆ ಡಿಕ್ಕಿಯಾಗಿತ್ತು.

ಬಡಗುತಿಟ್ಟು ಯಕ್ಷಗಾನ  ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ – Vishwanews24

ಲಖನೌ-ಹರ್ದೋಯಿ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮಣಿಕರ್ಣಿಕಾ ಕುಮಾರಿ ಮೃತಪಟ್ಟಿದ್ದರು. “ಸುರ್ಸಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಮಣಿಕರ್ಣಿಕಾ ಕುಮಾರಿ ಅವರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳುವಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಇದಾದ ಬಳಿಕ ಅವರು ಮೃತಪಟ್ಟಿದ್ದರು. ಮಣಿಕರ್ಣಿಕಾ ಅವರ ಕಚೇರಿಯ ಗುರುತಿನ ಚೀಟಿ ಆಧಾರದ ಮೇಲೆ ಅವರ ಪತಿಗೆ ಕರೆ ಮಾಡಿ ವಿಷಯ ತಿಳಿಸಲಾಯಿತು” ಎಂದು ಸುರ್ಸಾ ಎಸ್‌ಎಚ್‌ಒ ಇಂದ್ರೇಶ್‌ ಕುಮಾರ್‌ ಯಾದವ್‌ ಮಾಹಿತಿ ನೀಡಿದ್ದಾರೆ.

ಡೆತ್‌ನೋಟ್‌ನಲ್ಲಿ ಏನಿದೆ?
ಪತ್ನಿಯ ಸಾವಿನಿಂದ ನೊಂದ ಪತಿಯು ಮನೆಗೆ ಬಂದವರೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಬಳಿ ಡೆತ್‌ನೋಟ್‌ ಪತ್ತೆಯಾಗಿದ್ದು, “ನಾವು ಇದ್ದರೂ ಜತೆಯಾಗಿಯೇ, ಸತ್ತರೂ ಜತೆಯಾಗಿಯೇ” ಎಂಬುದಾಗಿ ಬರೆದಿದ್ದಾರೆ. ಪತ್ನಿಯ ವಸ್ತುಗಳನ್ನು ಮನೆಗೆ ತೆಗೆದುಕೊಂಡು ಹೋದ ಯೋಗೇಶ್‌ ಕುಮಾರ್‌ ಬಾಗಿಲು ಹಾಕಿಕೊಂಡಿದ್ದಾರೆ. ಎಷ್ಟು ಹೊತ್ತಾದರೂ ಬಾಗಿಲು ತೆರೆಯದ ಕಾರಣ ಪಕ್ಕದ ಮನೆಯವರು ಹೋಗಿ ನೋಡಿದಾಗ ಯೋಗೇಶ್‌ ಕುಮಾರ್‌ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ಬಡಗುತಿಟ್ಟು ಯಕ್ಷಗಾನ  ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ – Vishwanews24

Leave a Reply