ಅಯೋಧ್ಯೆ ತೀರ್ಪು ಏನೇ ಬಂದರೂ ಅದು ಭಾರತಕ್ಕೆ ಹೊಸ ಅಧ್ಯಾಯ ಆರಂಭವಾಗಿರಬೇಕು : ಅಣ್ಣಾಮಲೈ -Vishwanews24
ಬೆಂಗಳೂರು: ಮಾಜಿ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ತೀರ್ಪು ಏನೇ ಬಂದರೂ ಅದು ಭಾರತಕ್ಕೆ ಹೊಸ ಅಧ್ಯಾಯ ಆರಂಭವಾಗಿರಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಅಣ್ಣಾಮಲೈ ತಮ್ಮ ಟ್ವಿಟ್ಟರಿನಲ್ಲಿ, ಅಯೋಧ್ಯೆ ಬಗ್ಗೆ ಏನೇ ತೀರ್ಪು ಬಂದರೂ ಅದು ಹೊಸ ಭಾರತಕ್ಕೆ ಮುನ್ನುಡಿ. ಈ ದಿನವು ಮಾನವೀಯತೆಗೆ ಶಾಂತಿ, ಸಹನೆ ಹಾಗೂ ಗೌರವವನ್ನು ನೀಡಲಿ. ನಾವು ಸ್ವತಃ ಹೇರಿದ ಗುರುತುಗಳನ್ನು ತೆಗೆದು ಹಾಗೂ ನಮ್ಮ ‘ಭಾರತೀಯ’ ಗುರುತನ್ನು ಮೊದಲು ತರುವ ದಿನ ಆಗಿರಬೇಕು” ಎಂದು ಟ್ವೀಟ್ ಮಾಡಿದ್ದಾರೆ.
ಈ ಟ್ವೀಟ್ ನೋಡಿ ಅಣ್ಣಾಮಲೈ ಅವರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಕೆಲವರು, “ನೀವು ಹೇಳಿದ್ದು ನಿಜ ಸರ್, ನಾವು ಮೊದಲು ಭಾರತೀಯರಾಗಿರಬೇಕು” ಎಂದು ಕಮೆಂಟ್ ಮಾಡಿದ್ದಾರೆ. ಮತ್ತೆ ಕೆಲವರು ಅಣ್ಣಾಮಲೈ ಅವರ ಮಾತನ್ನು ಒಪ್ಪಿಕೊಂಡು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
Whichever way the Ayodhya verdict goes today, this should be the beginning of a new chapter for India. Let this day usher in peace, tolerance & respect for humanity. Also a day to shed our self imposed identities and to bring our identity of ‘Indian’ to the forefront!
— K.Annamalai (@annamalai_k) November 9, 2019
