ಅಯೋಧ್ಯೆ ವಿವಾದ : ವಿಚಾರಣೆಯನ್ನು ಜ.29ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್
ಹೊಸದಿಲ್ಲಿ, :ಅಯೋಧ್ಯೆಯ ರಾಮಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ವಿಚಾರಣೆಯನ್ನು ಜನವರಿ 29ಕ್ಕೆ ಮುಂದೂಡಿದೆ.
ಅಯೋಧ್ಯೆಯಲ್ಲಿ ರಾಮಮಂದಿರ –ಬಾಬ್ರಿ ಮಸೀದಿ ವಿವಾದ ಕುರಿತು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠದಲ್ಲಿ ಇಂದಿನಿಂದ ವಿಚಾರಣೆ ನಿಗದಿಯಾಗಿತ್ತು. ಆದರೆ ಸಾಂವಿಧಾನಿಕ ಪೀಠದಲ್ಲಿ ಒಬ್ಬರಾದ ನ್ಯಾಯಮೂರ್ತಿ ಉದಯ್ ಲಲಿತ್ ವಿಚಾರಣೆಯಿಂದ ಹಿಂದೆ ಸರಿದ ಹಿನ್ನೆಲೆ ವಿಚಾರಣೆಯನ್ನ ಮುಂದೂಡಲಾಗಿದೆ.
ವಿಚಾರಣೆ ಪೀಠದಲ್ಲಿದ್ದ ಐವರು ನ್ಯಾಯಮೂರ್ತಿಗಳಲ್ಲಿ ಒಬ್ಬರಾಗಿರುವ ಉದಯ್ ಲಲಿತ್ ವಿಚಾರಣೆಯಿಂದ ಹಿಂದೆ ಸರಿದ ಹಿನ್ನಲೆಯಲ್ಲಿ ವಿಚಾರಣೆಯನ್ನು 29 ಕ್ಕೆ ಮುಂದೂಡಲಾಗಿದೆ. ಇಂದು ವಿಚಾರಣೆ ಆರಂಭಿಸಿದ ರಂಜನ್ ಗೊಗೊಯ್ ನೇತೃತ್ವದ ಪೀಠ ‘ಅಯೋಧ್ಯೆ ಪ್ರಕರಣದಲ್ಲಿ ಇಂದು ವಿಚಾರಣೆ ನಡೆಯುವುದಿಲ್ಲ. ವಿಚಾರಣೆಯ ಅರ್ಜಿಗಳನ್ನು ಮಾತ್ರ ನಾವು ಕೈಗೆತ್ತಿಕೊಳ್ಳುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೋಗಯ್ ವಿವಾದ ವಿಚಾರಣೆ ಸಂಬಂಧ ಹೊಸ ಪೀಠ ರಚನೆ ಮಾಡಲಾಗುತ್ತದೆ. ಜನವರಿ 29ರಿಂದ ಹೊಸಪೀಠದಲ್ಲಿ ವಿಚಾರಣೆ ನಡೆಯಲಿದೆ ಎಂದು ತಿಳಿಸಿದ್ದಾರೆ. ನ್ಯಾಯಮೂರ್ತಿ ಉದಯ್ ಲಲಿತ್ ಅವರು ವಿಚಾರಣಾ ಪೀಠದಲ್ಲಿರುವ ಕುರಿತು ವಕೀಲರಾದ ರಾಜೀವ್ ಧವನ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.
