ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ
ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಮೇಲ್ವಿಚಾರಣೆಗಾಗಿ ಒಂಬತ್ತು ಮಂದಿ ಸಂತರುಗಳ ಸಮಿತಿ ರಚನೆ ಮಾಡಲಾಗಿದ್ದು, ಇದರಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೂ ಸ್ಥಾನ ಲಭಿಸಿದೆ.
ಶ್ರೀರಾಮ ಮಂದಿರದ ಟ್ರಸ್ಟ್ ಈ ಸಮ್ಮತಿ ನೀಡಿದ್ದು, ಇದರ ಅಧ್ಯಕ್ಷರಾಗಿ ಮಹಂತ ನೃತ್ಯ ಗೋವಿಂದ ದೇವ ಗಿರಿ ಅವರು ವಹಿಸಿಕೊಂಡಿದ್ದಾರೆ.
ಇದನ್ನೂ ಓದಿ:
ದ್ವೇಷ ಭಾಷಣ ಮಾಡಿರುವ ಸಿ.ಟಿ.ರವಿಯನ್ನು ಕೂಡಲೇ ಬಂಧಿಸಿ: ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ ಆಗ್ರಹ – vishwanews24
ಸಮಿತಿಯಲ್ಲಿ ಜಗದ್ಗುರು ಶಂಕರಾಚಾರ್ಯ ವಾಸುದೇವಾನಂದ ಸರಸ್ವತಿ, ನಿರ್ಮೋಹಿ ಅಖಾಡದ ದಿನೇಂದ್ರ ದಾಸ್, ಮುನಿರಾಮ್ ಚವಾನಿಯ ಕಮಲನಯನ ದಾಸ್, ರಾಮವಲ್ಲಭ ಕುಂಜದ ರಾಜ್ಕುಮಾರ್ ದಾಸ್ ಹಾಗೂ ರಾಮ ಕಥಾ ಕುಂಜದ ರಾಮಾನಂದ ದಾಸ್ ಸೇರಿದಂತೆ ಹಲವು ಪ್ರಮುಖ ಧಾರ್ಮಿಕ ಮುಖಂಡರು ಸದಸ್ಯರಾಗಿದ್ದಾರೆ.
