ಅಯೋಧ್ಯೆಯ ರಾಮಮಂದಿರದಲ್ಲಿ ಧರ್ಮ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ – vishwanews24

Featured, ರಾಷ್ಟ್ರ ನ್ಯೂಸ್

ಅಯೋಧ್ಯೆಯ ರಾಮಮಂದಿರದಲ್ಲಿ ಧರ್ಮ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ 

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಅಯೋಧ್ಯೆಯ ರಾಮಮಂದಿರದಲ್ಲಿ ಧರ್ಮ ಧ್ವಜಾರೋಹಣ ನೆರವೇರಿಸಿದರು.

ಮೋದಿ ಅವರು 22 ಅಡಿ ಎತ್ತರದ ಕೇಸರಿ ಧ್ವಜವನ್ನು ಹಾರಿಸಿ, ಸಾಧುಗಳು, ಗಣ್ಯರು ಮತ್ತು ರಾಮ ಜನ್ಮಭೂಮಿ ಟ್ರಸ್ಟ್ ಸದಸ್ಯರ ಸಮ್ಮುಖದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿದರು. ಪ್ರಧಾನಿಗೆ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಸಾಥ್‌ ನೀಡಿದರು.

ಧ್ವಜಾರೋಹಣ ಸಮಾರಂಭಕ್ಕೂ ಮುನ್ನ ಪ್ರಧಾನಿ ಮೋದಿ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ರಾಮ ದರ್ಬಾರ್‌ನಲ್ಲಿ ಪ್ರಾರ್ಥನೆ ಸಲ್ಲಿಸಿದರು. ಗರ್ಭಗುಡಿಯಲ್ಲಿ ಆರತಿ ಬೆಳಗಿದರು. ರಾಮಲಲ್ಲಾನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಉಡುಪಿ : ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಟಾನಕ್ಕಾಗಿ “ನಮ್ಮ ನಡಿಗೆ ವಾರ್ಡ್ ಕಡೆಗೆ” ಕಾರ್ಯಕ್ರಮ: ರಮೇಶ್ ಕಾಂಚನ್ – vishwanews24

ಧ್ವಜದ ವಿಶೇಷತೆಗಳೇನು ?
* ರಾಮಮಂದಿರದ ಮೇಲೆ ಹಾರಾಡುತ್ತಿರುವ ಧ್ವಜ ತುಂಬಾ ವಿಶೇಷವಾಗಿದ್ದು, ದೈವಿಕ ಧ್ವಜವನ್ನು ಗುಜರಾತ್‌ನ ಅಹಮದಾಬಾದ್‌ನಲ್ಲಿ ತಯಾರಿಸಲಾಗಿದೆ.
* ಅಯೋಧ್ಯೆ ರಾಮ ಮಂದಿರದ ಧಾರ್ಮಿಕ ಧ್ವಜದಲ್ಲಿರುವ ಚಿಹ್ನೆಗಳಿಗೆ ಪ್ರತಿಯೊಂದಕ್ಕೂ ವಿಶೇಷ ಅರ್ಥವಿದೆ. ಕೇಸರಿ ಬಣ್ಣದ ಧ್ವಜ, ಸೂರ್ಯ ದೇವರು ಮತ್ತು ಓಂ ಚಿಹ್ನೆ ಹೊಂದಿದೆ.
* ಧಾರ್ಮಿಕ ಮಹತ್ವವುಳ್ಳ ವಿಶಿಷ್ಟವಾದ ಮರದ ಚಿತ್ರವನ್ನು ಸಹ ಧ್ವಜದ ಮೇಲೆ ಚಿತ್ರಿಸಲಾಗಿದೆ.
* ತಯಾರಿಸಲು 25 ದಿನಗಳು ಬೇಕಾಯಿತು. ಮೂರು ಪದರಗಳ ಬಟ್ಟೆಯಿಂದ ತಯಾರಿಸಲಾಗಿದೆ. ಇದರಲ್ಲಿ ಬಳಸಲಾದ ಪ್ರತಿಯೊಂದು ಅಂಶವೂ ಸ್ಥಳೀಯವಾಗಿದೆ.
* ಅಂಚುಗಳನ್ನು ಗೋಲ್ಡನ್ ರೇಷ್ಮೆಯಿಂದ ಮಾಡಲಾಗಿದ್ದು, ಎಲ್ಲಾ ಚಿಹ್ನೆಗಳು ಕೈಯಿಂದ ಮಾಡಲಾಗಿದೆ. ಅವೆಲ್ಲವನ್ನೂ ಕೈಯಿಂದ ರಚಿಸಲು 7-8 ದಿನಗಳು ಬೇಕಾಯಿತು.

ಉಡುಪಿ:  ಪ್ರಧಾನಮಂತ್ರಿ ಜಿಲ್ಲಾ ಭೇಟಿ ಸಂದರ್ಭದಲ್ಲಿ ಶಿಷ್ಠಾಚಾರ ಪಾಲಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ – vishwanews24

Leave a Reply