ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಹೊಸ ಮಸೀದಿಯ ಅಡಿಪಾಯಕ್ಕೆ ಮೆಕ್ಕಾದಿಂದ ಬಂದ ಪವಿತ್ರ ಇಟ್ಟಿಗೆ – Vishwanews24

Featured, ರಾಷ್ಟ್ರ ನ್ಯೂಸ್

ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಹೊಸ ಮಸೀದಿಯ ಅಡಿಪಾಯಕ್ಕೆ ಮೆಕ್ಕಾದಿಂದ ಬಂದ ಪವಿತ್ರ ಇಟ್ಟಿಗೆ

ಅಯೋಧ್ಯೆ (Vishwanews24): ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಹೊಸ ಮಸೀದಿಯ ಅಡಿಪಾಯಕ್ಕೆ ಮೆಕ್ಕಾದಿಂದ ಪವಿತ್ರ ಇಟ್ಟಿಗೆ ತರಲಾಗಿದೆ.

ರಾಮಜನ್ಮಭೂಮಿ ವಿವಾದದಲ್ಲಿ ಸುಪ್ರಿಂ ಕೋರ್ಟ್ ಆದೇಶದಂತೆ ಮುಸ್ಲಿಮರಿಗೆ ಪರಿಹಾರವಾಗಿ ಅಯೋಧ್ಯೆಯಲ್ಲಿ ಭೂಮಿಯನ್ನು ನೀಡಲಾಗಿತ್ತು. ಇದೀಗ ಈ ಭೂಮಿಯಲ್ಲಿ ಹೊಸ ಮಸೀದಿ ನಿರ್ಮಾಣ ಮಾಡಲಾಗುತ್ತಿದ್ದು, ಈ ಮಸೀದಿಯ ಅಡಿಪಾಯಕ್ಕೆ ಮೆಕ್ಕಾದಲ್ಲಿ ಪವಿತ್ರಗೊಳಿಸಲ್ಪಟ್ಟ ಇಟ್ಟಿಗೆಯನ್ನು ತರಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಇಂಡೋ-ಇಸ್ಲಾಮಿಕ್ ಸಾಂಸ್ಕೃತಿಕ ಫೌಂಡೇಶನ್ (ಐಐಸಿಎಫ್) ಪದಾಧಿಕಾರಿಗಳು, ಮೆಕ್ಕಾದಲ್ಲಿ ಪವಿತ್ರಗೊಳಿಸಲ್ಪಟ್ಟ ಇಟ್ಟಿಗೆಯನ್ನು ಕಪ್ಪು ಮಣ್ಣಿನಿಂದ ಮಾಡಲಾಗಿದೆ. ಈ ಇಟ್ಟಿಗೆಯನ್ನು ಚಿನ್ನದಲ್ಲಿ ಕೆತ್ತಿ ಕುರಾನ್ ನ ಕೆಲ ಉಪದೇಶಗಳನ್ನು ಹೊಂದಿದೆ. ಈ ಪವಿತ್ರ ಇಟ್ಟಿಗೆಯನ್ನು ಮಾ. 12 ರಂದು ರಂಜಾನ್ ಈದ್ ಬಳಿಕ ಅಯೋಧ್ಯೆಯ ಮಸೀದಿ ಸ್ಥಳವಿರುವ ಧನ್ನಿಪುರ ಗ್ರಾಮಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ ಎಂದು ತಿಳಿಸಿದ್ದಾರೆ.

ಇತಿಹಾಸದಲ್ಲೇ ಮೊದಲ ಬಾರಿಗೆ ಭಗವದ್ಗೀತೆಯ ಮೇಲೆ ಕೈಯಿಟ್ಟು ಪ್ರಮಾಣ ವಚನ ಸ್ವೀಕರಿಸಿದ ಭಾರತೀಯ ಮೂಲದ ಆಸ್ಟ್ರೇಲಿಯನ್‌ ಸೆನೆಟರ್‌  – Vishwanews24

ಈ ಕುರಿತು ಪ್ರತಿಕ್ರಿಯೆ ನೀಡಿದ ಐಐಸಿಎಫ್ ಸದಸ್ಯ ಮತ್ತು ಮಸೀದಿ ಅಭಿವೃದ್ಧಿ ಸಮಿತಿಯ ಮುಖ್ಯ ಸ್ಥಹಾಜಿ ಅರಾಫತ್ ಶೇಕ್ ಅವರು, ಮಹಾರಾಷ್ಟ್ರದಿಂದ ಇಟ್ಟಿಗೆಯನ್ನು ಮೆಕ್ಕಾಗೆ ತೆಗೆದುಕೊಂಡು ಹೋಗಲಾಗಿದೆ. ಅಲ್ಲಿ ಮೆಕ್ಕಾದ ಪವಿತ್ರ ನೀರಿನಿಂದ ಪ್ರೋಕ್ಷಣೆ ಮಾಡಿದ್ದೇನೆ. ಬಳಿಕ ಇಟ್ಟಿಗೆಯನ್ನು ಮದೀನಾ ಶರೀಫ್ ದರ್ಗಾಗೆ ತೆಗೆದುಕೊಂಡು ಹೋಗಲಾಗಿದ್ದು, ಅಲ್ಲಿನ ಪವಿತ್ರ ನೀರಿನಿಂದ ಪ್ರೋಕ್ಷಣೆ ಮಾಡಿ ಪ್ರಾರ್ಥನೆ ಸಲ್ಲಿಸಿ ಫೆ.2 ರಂದು ಪವಿತ್ರ ಇಟ್ಟಿಗೆಯನ್ನು ಮಹಾರಾಷ್ಟ್ರಕ್ಕೆ ತರಲಾಗಿದೆ ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಅಜ್ಮೇರ್ ಶರೀಫ್ ದರ್ಗಾದಲ್ಲಿ ಪವಿತ್ರ ಇಟ್ಟಿಗೆಗೆ ಪ್ರಾರ್ಥನೆ ಸಲ್ಲಿಸಲಾಗುವುದು. ಬಳಿಕ ಅಲ್ಲಿಂದ ಮೆರವಣಿಗೆ ಮೂಲಕ ಅಯೋಧ್ಯೆಗೆ ತರಲಾಗುವುದು. ಈ ಇಟ್ಟಿಗೆಯನ್ನು ಅಯೋಧ್ಯೆಯಲ್ಲಿ ನಿರ್ಮಾಣವಾಗುವ ಮೊಹಮ್ಮದ್ ಬಿನ್ ಅಬ್ದುಲ್ಲಾ ಮಸೀದಿಯ ಅಡಿಪಾಯಕ್ಕೆ ಬಳಸಲಾಗುತ್ತದೆ. ಏಪ್ರಿಲ್‌ ನಲ್ಲಿ ಮಸೀದಿ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ ಎಂದರು.

ಊಟಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು 6 ಮಂದಿ ಕಾರ್ಮಿಕರು ಮೃತ್ಯು, ಓರ್ವ ನಾಪತ್ತೆ – Vishwanews24

Leave a Reply