ಅಶ್ಲೀಲ ಸಿಡಿ ಪ್ರಕರಣದಲ್ಲಿ ರಮೇಶ್‌ ಜಾರಕಿಹೊಳಿ ಅವರನ್ನು ಕೂಡಲೇ ಬಂಧಿಸಿ : ಕಾಂಗ್ರೆಸ್‌ ಆಗ್ರಹ -Vishwanews24

Featured, ರಾಜ್ಯ ನ್ಯೂಸ್

ಸರ್ಕಾರ ಉರುಳಿಸುವ ಬೆದರಿಕೆ ಹಾಕುತ್ತಾ ರಾಜರೋಷಾವಾಗಿ ತಿರುಗುವ ಅತ್ಯಾಚಾರ ಆರೋಪಿ ಇದೇ ಮೊದಲು..

ಅಶ್ಲೀಲ ಸಿಡಿ ಪ್ರಕರಣದಲ್ಲಿ ರಮೇಶ್‌ ಜಾರಕಿಹೊಳಿ ಅವರನ್ನು ಕೂಡಲೇ ಬಂಧಿಸಿ : ಕಾಂಗ್ರೆಸ್‌ ಆಗ್ರಹ -Vishwanews24

ಬೆಂಗಳೂರು, : ಓರ್ವ ಅತ್ಯಾಚಾರ ಆರೋಪಿ ಸರ್ಕಾರ ಉರುಳಿಸುವ ಬೆದರಿಕೆಗಳನ್ನು ಹಾಕಿಕೊಂಡು ರಾಜಾರೋಷವಾಗಿ ತಿರುಗುತ್ತಿರುವುದು ಬಹುಶಃ ಇದೇ ಮೊದಲೇನೋ ಎಂದು ಹೇಳಿರುವ ಕಾಂಗ್ರೆಸ್‌, ಅಶ್ಲೀಲ ಸಿಡಿ ಪ್ರಕರಣದಲ್ಲಿ ಕೂಡಲೇ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದೆ.

ಸಿಡಿಯಲ್ಲಿರುವ ಯುವತಿ ಶುಕ್ರವಾರ ಲಿಖಿತ ದೂರು ನೀಡಿದ್ದಾಳೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ರಮೇಶ್‌ ಜಾರಕಿಹೊಳಿ, “ಮೈತ್ರಿ ಸರ್ಕಾರವನ್ನೇ ಉರುಳಿಸಿದ್ದೇವೆ, ಇನ್ನು ಇದ್ಯಾವ ಲೆಕ್ಕ. ನಮ್ಮ ಆಟ ಇನ್ನು ಪ್ರಾರಂಭವಾಗಲಿದೆ. ಶೀಘ್ರದಲ್ಲೇ ಈ ಸಿಡಿ ಹಿಂದಿನ ಮಹಾನಾಯಕನನ್ನು ಬಹಿರಂಗಪಡಿಸುವ ಮೂಲಕ ಬಾಂಬ್‌ ಸಿಡಿಸಲಿದ್ದೇನೆ” ಎಂದು ಹೇಳಿದ್ದರು.

ಇದನ್ನೂ ಓದಿ :ಉಡುಪಿ :ಕನ್ನಡ ಬಳಕೆ ಕಡ್ಡಾಯ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಈ ಬಗ್ಗೆ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ”ಅತ್ಯಾಚಾರ ಆರೋಪಿ ಸರ್ಕಾರವನ್ನೇ ಉರುಳಿಸಿಬಿಡಬಲ್ಲೆ, ಬಾಂಬ್ ಹಾಕುತ್ತೇನೆ, ಮತ್ತೊಂದು ಮಾಡುತ್ತೇನೆ ಎನ್ನುವ ಬೆದರಿಕೆ ಹಾಕುತ್ತಾ ರಾಜಾರೋಷವಾಗಿ ತಿರುಗುತ್ತಿರುವುದು ಬಹುಶಃ ಇದೇ ಮೊದಲೇನೋ” ಎಂದು ಹೇಳಿದೆ. ”ಕೂಡಲೇ ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕು” ಎಂದು ಆಗ್ರಹಿಸಿರುವ ಕಾಂಗ್ರೆಸ್,‌ ”ಪ್ರಕರಣ ಪ್ರಭಾವಕ್ಕೆ ಒಳಗಾಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ” ಎಂದು ಹೇಳಿದೆ.

ಇದನ್ನೂ ಓದಿ :ಹೆಜಮಾಡಿ: ಟೋಲ್ ಗೇಟಿನಲ್ಲಿ ಸ್ಥಳೀಯ ವಾಹನಗಳಿಗೆ ವಿನಾಯತಿ: ನವಯುಗ ಕಂಪನಿಗೆ ಮನವಿ -Vishwanews24