ಆಜಾನ್ ವಿವಾದ : ಕಾನೂನನ್ನು ಕೈಗೆತ್ತಿಕೊಳ್ಳುವವರ ವಿರುದ್ಧ ಕ್ರಮ : ಗೃಹ ಸಚಿವ – Vishwanews24
ಆಜಾನ್ ವಿವಾದ : ಕಾನೂನನ್ನು ಕೈಗೆತ್ತಿಕೊಳ್ಳುವವರ ವಿರುದ್ಧ ಕ್ರಮ : ಗೃಹ ಸಚಿವ – Vishwanews24
ಬೆಂಗಳೂರು: ಕರ್ನಾಟಕದಲ್ಲಿ ಆಜಾನ್ ವಿರೋಧಿಸಿ ಶ್ರೀರಾಮಸೇನೆ ಹಾಗೂ ಹಿಂದೂಪರ ಸಂಘಟನೆಗಳು ಸುಪ್ರಭಾತ ಅಭಿಯಾನ ಆರಂಭಿಸಿದ್ದು, ಕಾನೂನನ್ನು ಕೈಗೆತ್ತಿಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯಗಳ ಆದೇಶದಂತೆ ಶಬ್ದ ಮಾಲಿನ್ಯ ಉಂಟು ಮಾಡುವ ಯಾವುದೇ ಚಟುವಟಿಕೆಗಳನ್ನು ನಿಯಂತ್ರಿಸಲು ನ್ಯಾಯಾಲಯಗಳ ಆದೇಶದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು. ನ್ಯಾಯಲಯದ ಆದೇಶವನ್ನು ಎಲ್ಲರೂ ಗೌರವಿಸಬೇಕು ಎಂದರು.
ಇನ್ನು ನ್ಯಾಯಾಲಯದ ಆದೇಶ ಮೀರಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳುವಂತಿಲ್ಲ. ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ ಕೈಗೊಳ್ಳಲು ಹಿಂಜರಿಯಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಕಟಪಾಡಿ : ಏಣಗುಡ್ಡೆ ಶ್ರೀ ಬ್ರಹ್ಮ ಬೈದೇರುಗಳ ಗರಡಿ ಹೊರೆಕಾಣಿಕೆ ಮೆರವಣಿಗೆ ಸಂಪನ್ನ – Vishwanews24
