ಆಟವಾಡುವಾಗ ಕಾಲು ಜಾರಿ ನಾಲೆಗೆ ಬಿದ್ದು ಬಾಲಕಿ ನೀರುಪಾಲು – Vishwanews24

Featured, ರಾಜ್ಯ ನ್ಯೂಸ್

ಆಟವಾಡುವಾಗ ಕಾಲು ಜಾರಿ ನಾಲೆಗೆ ಬಿದ್ದು ಬಾಲಕಿ ನೀರುಪಾಲು

ಹಾಸನ: ಹಾರಂಗಿ ಬಲದಂಡೆ ನಾಲೆಯಲ್ಲಿ ಕಾಲುಜಾರಿ ಬಿದ್ದು ಬಾಲಕಿಯೊಬ್ಬಳು ನೀರುಪಾಲಾಗಿರುವ ಘಟನೆ ಹಾಸನದ ಅರಕಲಗೂಡು ತಾಲೂಕಿನ ಮಧುರನಹಳ್ಳಿಯಲ್ಲಿ ನಡೆದಿದೆ.

ರೇವಣ್ಣ ಹಾಗೂ ಭಾಗ್ಯ ದಂಪತಿಯ ಮಗಳು ಸುಪ್ರೀತಾ (5) ಮೃತ ಬಾಲಕಿ ಎಂದು ಗುರುತಿಸಲಾಗಿದೆ.

ಶುಕ್ರವಾರ ಕರ್ನಾಟಕ ಬಂದ್ ಹಿನ್ನಲೆ ಶಾಲೆಗೆ ರಜೆ ಇದ್ದದ್ದರಿಂದ ಮಕ್ಕಳೊಂದಿಗೆ ಹಾರಂಗಿ ಬಲದಂಡೆ ನಾಲೆಗೆ ಆಟವಾಡುವಾಡಲು ಹೋಗಿದ್ದಾಗ ಈ ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ತಾಲೂಕು ಕಚೇರಿಯ ಶಿರೆಸ್ತೇದಾರರಾದ ಸಿ.ಸ್ವಾಮಿ .ಉಪತಹಶೀಲ್ದಾರರಾದ ರವಿ ಗ್ರಾಮ ಆಡಳಿತ ಅಧಿಕಾರಿ ಪ್ರದೀಪ್ ಕಾಂಬ್ಳೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಸುರತ್ಕಲ್ :  ಭೀಕರ ಅಪಘಾತ; ಟಿಪ್ಪರ್ ಮತ್ತು ಮರಕ್ಕೆ ಡಿಕ್ಕಿಯಾದ ಕಾರು – ಓರ್ವ ಸ್ಥಳದಲ್ಲೇ ಸಾವು # ಇಬ್ಬರಿಗೆ ಗಾಯ – Vishwanews24

ಈ ಸಂಬಂಧ ಅರಕಲಗೂಡು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply