ಆಡಳಿತಾರೂಢ ಬಿಜೆಪಿ ಸರ್ಕಾರ ಇನ್ನು ಮೂರು ತಿಂಗಳು ಕೂಡ ಇರುವುದಿಲ್ಲ, ಅ.24ರ ನಂತರ ಸರ್ಕಾರ ಪತನಗೊಳ್ಳಲಿದೆ : ಕುಮಾರಸ್ವಾಮಿ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಆಡಳಿತಾರೂಢ ಬಿಜೆಪಿ ಸರ್ಕಾರ ಇನ್ನು ಮೂರು ತಿಂಗಳು ಕೂಡ ಇರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈಗಾಗಲೇ ರಾಜ್ಯದ 17 ವಿಧಾನಸಭಾ ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಚುನಾವಣೆ ಆಯೋಗ ಉಪಚುನಾವಣೆ ಘೋಷಣೆ ಮಾಡಿದೆ. ಈ ಬೆನ್ನಲ್ಲೇ ರಾಜ್ಯ ಬಿಜೆಪಿ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿರುವ ಕುಮಾರಸ್ವಾಮಿ, ಅ.24ರ ನಂತರ ಬಿ ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪತನಗೊಳ್ಳಲಿದೆ ಎಂದು ಹೇಳಿದ್ದಾರೆ.

ಬಿಜೆಪಿ ಇನ್ನೂ ಅಲ್ಪಸಂಖ್ಯೆಯಲ್ಲಿಯೇ ಇದೆ. ಸ್ಥಿರ ಸರ್ಕಾರಕ್ಕೆ ಅವರ ಬಳಿ ಸಂಖ್ಯೆಗಳಿಲ್ಲ. ರೈತರ ಪರವಾಗಿರುವ ಸರ್ಕಾರ ಕಚೇರಿಯಲ್ಲಿಯೇ ಇರುವುದಿಲ್ಲ. ಆಡಳಿತಾರೂಢ ಬಿಜೆಪಿ ಸರ್ಕಾರ ಇನ್ನು ಮೂರು ತಿಂಗಳು ಕೂಡ ಇರುವುದಿಲ್ಲ ಎಂದು ದೂರಿದ್ದಾರೆ.

ಕಾಂಗ್ರೆಸ್ ಪಕ್ಷದ ಕೇಂದ್ರ ನಾಯಕರ ಬಗ್ಗೆ ನಾನು ಮಾತುನಾಡುತ್ತಿಲ್ಲ. ಕಾಂಗ್ರೆಸ್ ನಾಯಕರಲ್ಲಿ ಕೆಲವರು ಜೆಡಿಎಸ್ ಮುಗಿಸಲು ನಿಂತಿದ್ದಾರೆ. ಕಳೆದ ಬಾರಿ ಯಾವುದೇ ಪಕ್ಷಕ್ಕೆ ಬಹುಮತ ಸಿಗದಿದ್ದಾಗ ಕಾಂಗ್ರೆಸ್ ಜೆಡಿಎಸ್ ಸೇರಿ ಸರ್ಕಾರ ಮಾಡಿದೆವು. ಆದರೆ, ಕಾಂಗ್ರೆಸ್ ಪಕ್ಷದಿಂದ ನನಗೆ ಸರಿಯಾಗಿ ಬೆಂಬಲ ಸಿಗಲಿಲ್ಲವಾದ್ದರಿಂದ ನಾನು ಕೆಟ್ಟ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.